ಟೀಂ ಇಂಡಿಯಾ 
ಕ್ರಿಕೆಟ್

2ನೇ ಟೆಸ್ಟ್: 145 ರನ್ ಗುರಿ ಬೆನ್ನಟ್ಟಲು ತಿಣುಕಾಡುತ್ತಿರುವ ಭಾರತ, 45 ರನ್‌ಗೆ 4 ವಿಕೆಟ್ ಪತನ!

ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 145 ರನ್ ಗಳ ಅಲ್ಪಮೊತ್ತ ಸಿಕ್ಕಿದ್ದರೂ ಭಾರತ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮೀರ್ಪುರ್: ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 145 ರನ್ ಗಳ ಅಲ್ಪಮೊತ್ತ ಸಿಕ್ಕಿದ್ದರೂ ಭಾರತ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ 231 ರನ್ ಗಳಿಗೆ ಆಲೌಟ್ ಆಗಿದ್ದು ಈ ಮೂಲಕ ಭಾರತಕ್ಕೆ ಗೆಲ್ಲಲ್ಲು 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 2, ಶುಭ್ಮನ್ ಗಿಲ್ 7, ಚೇತೇಶ್ವರ ಪೂಜಾರ 6 ಹಾಗೂ ವಿರಾಟ್ ಕೊಹ್ಲಿ 1 ರನ್ ಗಳಿಗೆ ಔಟಾಗಿದ್ದಾರೆ. 

ಇನ್ನು ಅಕ್ಷರ್ ಪಟೇಲ್ ಅಜೇಯ 26 ರನ್ ಹಾಗೂ ಜಯದೇವ್ ಉನದ್ಕತ್ ಅಜೇಯ 3 ರನ್ ಹೊಡೆದಿದ್ದು ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದಾರೆ. ಇನ್ನು ನಾಲ್ಕನೇ ದಿನದಾಟದಲ್ಲಿ ಭಾರತ ಗೆಲ್ಲಲು 100 ರನ್ ಗಳನ್ನು ಹೊಡೆಯಬೇಕಿದೆ.

ಮೀರ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ 227 ರನ್ ಪೇರಿಸಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 314 ರನ್ ಗಳಿಗೆ ಆಲೌಟ್ ಆಗುವ ಮೂಲಕ 87 ರನ್ ಗಳ ಮುನ್ನಡೆ ಸಾಧಿಸಿತು. 

ಮೂರನೇ ದಿನವಾದ ಇಂದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಇದೀಗ 231 ರನ್ ಗಳಿಗೆ ಆಲೌಟ್ ಆಗಿದೆ. ಇನ್ನು ಭಾರತಕ್ಕೆ 145 ರನ್ ಗಳ ಅಲ್ಪಮೊತ್ತ ನೀಡಿತ್ತು.

ಭಾರತ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಇನ್ನು ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT