ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ 
ಕ್ರಿಕೆಟ್

ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹ

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.

ದುಬೈ: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.

ಹೌದು.. ಇಂದು ಢಾಕಾದಲ್ಲಿ ಮುಕ್ತಾಯಗೊಂಡ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 3 ವಿಕೆಟ್ ಗಳ ವಿರೋಚಿತ ಗೆಲುವು ಸಾಧಿಸಿದ್ದು, ಈ ಗೆಲುವಿನ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ತನ್ನ 2ನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಪಟ್ಟಿಯಲ್ಲಿ 87 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿತ್ತು. ಇದೀಗ 2ನೇ ಪಂದ್ಯದಲ್ಲೂ ಗೆಲುವು ಸಾಧಿಸಿ ತನ್ನ ಅಂಕಗಳಿಕೆಯನ್ನು 12 ಅಂಕಗಳಷ್ಟು ಏರಿಕೆ ಮಾಡಿಕೊಂಡು ತನ್ನ ಗಳಿಕೆಯನ್ನು 99ಕ್ಕೆ ಏರಿಕೆ ಮಾಡಿಕೊಂಡಿದೆ. ಆ ಮೂಲಕ ಪಟ್ಟಿಯಲ್ಲಿ ತನ್ನ 2ನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಆ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಫೈನಲ್ ಗೇರುವ ಅವಕಾಶಕ್ಕೆ ಮತ್ತಷ್ಟು ಸನಿಹವಾಗಿದೆ.

ಇನ್ನು ಪಟ್ಟಿಯಲ್ಲಿ ಆಡಿರುವ 13 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ 120 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ.  ಆಡಿರುವ 14 ಪಂದ್ಯಗಳ ಪೈಕಿ 8 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿ 99 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಆಡಿರುವ 11 ಪಂದ್ಯಗಳ ಪೈಕಿ 6 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿ 72 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. 

ಉಳಿದಂತೆ  ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ತಂಡ 9 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 28 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ.

(WTC 2021-2023 ರಲ್ಲಿ, ತಂಡಗಳು ಪ್ರತೀ ಗೆಲುವಿಗೆ 12 ಅಂಕಗಳನ್ನು ಪಡೆಯುತ್ತವೆ, ಒಂದು ಡ್ರಾಕ್ಕೆ 4 ಮತ್ತು ಟೈ (ಫಲಿತಾಂಶ ರಹಿತ)ಗಾಗಿ ತಲಾ 6 ಅಂಕಗಳನ್ನು ಪಡೆಯುತ್ತವೆ. ಲೀಡರ್‌ಬೋರ್ಡ್ ಅನ್ನು ನಿರ್ಧರಿಸಲು ಪಾಯಿಂಟ್‌ಗಳ ಶೇಕಡಾವಾರು ವ್ಯವಸ್ಥೆಯನ್ನು (PCT) ಬಳಸಲಾಗುತ್ತದೆ)

ಉಳಿದಂತೆ ನೂತನ ಪಟ್ಟಿ ಇಂತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT