ಕ್ರಿಕೆಟ್

KGF 3: ಕೆಜಿಎಫ್ ಸ್ಟಾರ್ ಯಶ್ ಭೇಟಿ ಮಾಡಿದ ಕ್ಯಾಪ್ಟನ್ ಹಾರ್ದಿಕ್, ಕೃನಾಲ್ ಪಾಂಡ್ಯ!

ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು.

ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು.

ಕೆಜಿಎಫ್ ಸರಣಿಯ ಚಿತ್ರಗಳಲ್ಲಿ 'ರಾಕಿ ಭಾಯ್' ಎಂದು ಕರೆಯಲ್ಪಡುವ ಯಶ್, ಹಾರ್ದಿಕ್ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ಭೇಟಿಯಾದರು. ಹಾರ್ದಿಕ್ ಅವರನ್ನು ಭೇಟಿಯಾದ ಖುಷಿಯನ್ನು ಮುಚ್ಚಿಡಲು ಸಾಧ್ಯವಾಗಲಿಲ್ಲ. ಅವರು ಇನ್ಸ್ಟಾಗ್ರಾಮ್ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. "ಕೆಜಿಎಫ್-3" ಎಂಬ ಶೀರ್ಷಿಕೆ ಕೊಟ್ಟಿದ್ದು ಇದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದ ಮೂರನೇ ಭಾಗವೂ ಬರುವ ನಿರೀಕ್ಷೆಯಿದೆ. ಕೆಜಿಎಫ್ ಮೂರನೇ ಭಾಗಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ನಿಯಮಿತ ನಾಯಕ ರೋಹಿತ್ ಗಾಯಗೊಂಡಿರುವ ಕಾರಣ ಹಾರ್ದಿಕ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ.

ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಏಕದಿನ ತಂಡಕ್ಕೆ ಮರಳಿದ್ದಾರೆ. ಲೋಕೇಶ್ ರಾಹುಲ್ ತಂಡದಲ್ಲಿದ್ದರೂ ಉಪನಾಯಕನನ್ನಾಗಿ ಮಾಡಲಾಗಿದೆ. ಭಾರತದ ಭವಿಷ್ಯದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆಗಾರರು ನೋಡುತ್ತಿರುವುದು ಸ್ಪಷ್ಟವಾಗಿದೆ. ಟೆಸ್ಟ್ ತಂಡದಲ್ಲಿ ಪಾಂಡ್ಯಗೆ ಅವಕಾಶ ಸಿಗುತ್ತಿಲ್ಲವಾದರೂ, ಏಕದಿನ ಮತ್ತು ಟಿ20ಯಲ್ಲಿ ರೋಹಿತ್ ನಂತರ ಹಾರ್ದಿಕ್ ನಾಯಕನಾಗುವ ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT