ಟೀಂ ಇಂಡಿಯಾ 
ಕ್ರಿಕೆಟ್

ವಿರಾಟ್-ರೋಹಿತ್ ಸೇರಿದಂತೆ 6 ಆಟಗಾರರ T20 ವೃತ್ತಿಜೀವನ ಅಂತ್ಯ!

ಟೀಂ ಇಂಡಿಯಾದ ಹಿರಿಯ ಆಟಗಾರರಿಗೆ ಕೊಕ್ ನೀಡಲು ಬಿಸಿಸಿಐ ನಿರ್ಧರಿಸಿದ್ದು ಆಯ್ಕೆಗಾರರು ಮತ್ತು ತಂಡದ ಕೋಚಿಂಗ್ ಸಿಬ್ಬಂದಿ 6 ಭಾರತೀಯ ಆಟಗಾರರಿಗೆ ಇದೇ ರೀತಿಯ ಸಂದೇಶವನ್ನು ನೀಡಲು ಪ್ರಯತ್ನಿಸಿದ್ದಾರೆ.

ಟೀಂ ಇಂಡಿಯಾದ ಹಿರಿಯ ಆಟಗಾರರಿಗೆ ಕೊಕ್ ನೀಡಲು ಬಿಸಿಸಿಐ ನಿರ್ಧರಿಸಿದ್ದು ಆಯ್ಕೆಗಾರರು ಮತ್ತು ತಂಡದ ಕೋಚಿಂಗ್ ಸಿಬ್ಬಂದಿ 6 ಭಾರತೀಯ ಆಟಗಾರರಿಗೆ ಇದೇ ರೀತಿಯ ಸಂದೇಶವನ್ನು ನೀಡಲು ಪ್ರಯತ್ನಿಸಿದ್ದಾರೆ. 

ಭವಿಷ್ಯದ ಟೀಂ ಇಂಡಿಯಾವನ್ನು ಬಲಪಡಿಸುವ ಉದ್ದೇಶದಿಂದ ಈ ಪ್ರಯತ್ನವನ್ನು ಮಾಡಲಾಗಿದೆ. ಬಿಸಿಸಿಐ ಆಯ್ಕೆಗಾರರು ಭಾರತದ 6 ಹಿರಿಯ ಆಟಗಾರರನ್ನು ಈಗ ತಮ್ಮ ಟಿ20 ವೃತ್ತಿಜೀವನದ ಬಗ್ಗೆ ಯೋಚಿಸುವಂತೆ ಕೇಳಿಕೊಂಡಿದ್ದಾರೆ. ವರದಿ ಪ್ರಕಾರ, ಈ 6 ಕ್ರಿಕೆಟಿಗರಲ್ಲಿ ರೋಹಿತ್, ಶರ್ಮಾ, ವಿರಾಟ್ ಕೊಹ್ಲಿ, ಭುವನೇಶ್ವರ್ ಕುಮಾರ್, ಆರ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ದಿನೇಶ್ ಕಾರ್ತಿಕ್ ಹೆಸರು ಸೇರಿದೆ.

ಉನ್ನತ ಬಿಸಿಸಿಐ ಮೂಲಗಳ ಪ್ರಕಾರ, 'ಈಗ ನಾವು 2024ರ ಟಿ20 ವಿಶ್ವಕಪ್‌ಗಾಗಿ ಯೋಜಿಸುತ್ತಿದ್ದೇವೆ. ನಮ್ಮಲ್ಲಿ 35-36 ವರ್ಷ ವಯಸ್ಸಿನ ಅನೇಕ ಆಟಗಾರರಿದ್ದಾರೆ. ಈ ಆಟಗಾರರು ತಂಡದ ದೀರ್ಘಾವಧಿಯ ಯೋಜನೆಗೆ ಸರಿಹೊಂದುವುದಿಲ್ಲ. ಇನ್ನು ಮುಂದೆ ನಾವು ನಮ್ಮ ತಂಡವನ್ನು ಕಟ್ಟಬೇಕು. ಏಕೆಂದರೆ ಈಗ ಇಲ್ಲದಿದ್ದರೆ ಇನ್ಯಾವಾಗ. ಇಂತಹ ಪರಿಸ್ಥಿತಿಯಲ್ಲಿ ನಾವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಇನ್ನು ಮುಂದೆ ಟಿ20 ತಂಡದಲ್ಲಿ ವಯಸ್ಸಿಗೆ ತಕ್ಕಂತೆ ಹೊಂದಿಕೊಳ್ಳದ ಅಂತಹ ಆಟಗಾರರನ್ನು ಆಯ್ಕೆ ಮಾಡುವುದಾಗಿ ಹೇಳಿದ್ದಾರೆ.

ಸದ್ಯ ಟಿ20 ತಂಡದಿಂದ ಆರ್. ಅಶ್ವಿನ್, ಮೊಹಮ್ಮದ್ ಶಮಿ, ದಿನೇಶ್ ಕಾರ್ತಿಕ್ ಮತ್ತು ಭುವನೇಶ್ವರ್ ಕುಮಾರ್ ಸಂಪೂರ್ಣವಾಗಿ ಹೊರಗಿದ್ದಾರೆ. ಇವರಲ್ಲದೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸಕ್ರಿಯವಾಗಿದ್ದರೂ ಅವರಿಗೆ ಅವಕಾಶಗಳು ಕಡಿಮೆ. ಇನ್ನು ಕೆಎಲ್ ರಾಹುಲ್ ಅವರು ಟಿ20 ತಂಡದ ಯೋಜನೆಗೆ ಹೊಂದಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಅವರನ್ನು ಆಯ್ಕೆ ಮಾಡಲಾಗಿಲ್ಲ ಆದರೆ ಅವರು T20 ವಿಶ್ವಕಪ್‌ನ ಯೋಜನೆಯ ಭಾಗವಾಗಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT