ಟೀಂ ಇಂಡಿಯಾ 
ಕ್ರಿಕೆಟ್

ರಿಷಬ್ ಪಂತ್ ಭರ್ಜರಿ ಶತಕ: ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ! 

ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

ಮ್ಯಾಂಚೆಸ್ಟರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

ಮ್ಯಾಂಚೆಸ್ಟರ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 259 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲ್ಲು 260 ರನ್ ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ರಿಷಬ್ ಪಂತ್ ಭರ್ಜರಿ ಶತಕ ಬಾರಿಸುವ ಮೂಲಕ ಗೆಲುವು ತಂದುಕೊಟ್ಟರು. 

ಭಾರತ 42.1 ಓವರ್ ಮುಕ್ತಾಯಕ್ಕೆ 5 ವಿಕೆಟ್ ನಷ್ಟಕ್ಕೆ 261 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 17, ವಿರಾಟ್ ಕೊಹ್ಲಿ 17 ರಿಷಬ್ ಪಂತ್ ಅಜೇಯ 125 ರನ್, ಹಾರ್ದಿಕ್ ಪಾಂಡ್ಯ 71 ರನ್ ಬಾರಿಸಿದ್ದಾರೆ. 

ಇಂಗ್ಲೆಂಡ್ ಪರ ಜೇಸನ್ ರಾಯ್ 41 ರನ್ ಗಳಿಸಿ ಪಾಂಡ್ಯ ಬೌಲಿಂಗ್ ನಲ್ಲಿ ಔಟಾದರೆ, ಜೋಸ್ ಬಟ್ಲರ್ 60 ರನ್ ಗಳಿಗೆ ಔಟಾದರು. ಮೋಯಿನ್ ಅಲಿ 34, ಓವರ್ಟೋನ್ 32 ರನ್ ಗಳಿಗೆ ಔಟಾದರು. 

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 4, ಯಜುವೇಂದ್ರ ಚಹಾಲ್ 3, ಮೊಹಮ್ಮದ್ ಶಮಿ 2 ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT