ರಿಷಬ್ ಪಂತ್ 
ಕ್ರಿಕೆಟ್

3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ; ಅಪರೂಪದ ದಾಖಲೆ ಬರೆದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್

ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ರಿಷಬ್ ಪಂತ್ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಮತ್ತು ಏಕದಿನ ಶತಕಗಳನ್ನು ಗಳಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್-ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ರಿಷಬ್ ಪಂತ್ ಅವರ ಅಜೇಯ 125* ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗಿನ ಅವರ 133 ರನ್‌ಗಳ ಜೊತೆಯಾಟವು ಮ್ಯಾಂಚೆಸ್ಟರ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಅಂತಿಮ ODI ನಲ್ಲಿ ಭಾರತ 260 ರನ್ ಗಳನ್ನು ಯಶಸ್ವಿಯಾಗಿ ಬೆನ್ನಟ್ಟಲು ಸಹಾಯ ಮಾಡಿತು ಮತ್ತು ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು.

ಭಾರತದ ರಿಷಬ್ ಪಂತ್ ಅವರು ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಮತ್ತು ಏಕದಿನ ಎರಡರಲ್ಲೂ ಶತಕ ದಾಖಲಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್-ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ, ಏಷ್ಯಾದ ಹೊರಗೆ ಏಕದಿನ ಮಾದರಿಯಲ್ಲಿ ಶತಕ ಗಳಿಸಿದ ರಾಹುಲ್ ದ್ರಾವಿಡ್ ಮತ್ತು ಕೆಎಲ್ ರಾಹುಲ್ ಅವರಂತಹ ವಿಕೆಟ್ ಕೀಪರ್-ಬ್ಯಾಟರ್‌ಗಳ ಪಟ್ಟಿಗೆ ಇದೀಗ ಪಂತ್ ಸೇರಿಕೊಂಡಿದ್ದಾರೆ.

ಇದಕ್ಕೂ ಮೊದಲು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಭಾರತದ ಹಾರ್ದಿಕ್ ಪಾಂಡ್ಯ (4/24) ಮತ್ತು ಯುಜುವೇಂದ್ರ ಚಾಹಲ್ (3/60) ಅವರ ಅದ್ಭುತ ಸ್ಪೆಲ್‌ಗಳಿಗೆ ತತ್ತರಿಸಿ 259 ಕ್ಕೆ ಆಲೌಟ್ ಆಯಿತು. ಜೋಸ್ ಬಟ್ಲರ್ (60), ಜೇಸನ್ ರಾಯ್ (41) ಮತ್ತು ಮೊಯಿನ್ ಅಲಿ (34) ಆತಿಥೇಯರ ಪರವಾಗಿ ಕೆಲವು ನಿರ್ಣಾಯಕ ರನ್ ಗಳನ್ನು ಕಲೆಹಾಕಿದರು. ಇಂಗ್ಲೆಂಡ್ ನೀಡಿದ 260 ರನ್‌ಗಳನ್ನು ಬೆನ್ನಟ್ಟಿದ ಭಾರತಕ್ಕೆ ರೀಸ್ ಟೋಪ್ಲೆ ಆರಂಭದಲ್ಲಿ ಮಾರಣಾಂತಿಕವಾಗಿ ಪರಿಣಮಿಸಿದರು.

ಭಾರತದ ಅಗ್ರ ಕ್ರಮಾಂಕವನ್ನು ಪೆವಿಲಿಯನ್ ಗೆ ಅಟ್ಟಿದ್ಜದರಿಂದ ಭಾರತ ಕೇವಲ 72ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಂತರ ಹಾರ್ದಿಕ್ ಪಾಂಡ್ಯ-ರಿಷಬ್ ಪಂತ್ ಜೋಡಿ 133 ರನ್‌ಗಳ ಅಮೋಘ ಜೊತೆಯಾಟವಾಡಿ ಪಂದ್ಯದ ಗತಿಯನ್ನೇ ಬದಲಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT