5ನೇ ಟಿ20 ಪಂದ್ಯ ಸ್ಥಗಿತ 
ಕ್ರಿಕೆಟ್

ಭಾರತ vs ದಕ್ಷಿಣ ಆಫ್ರಿಕಾ: 5ನೇ ಟಿ20 ಪಂದ್ಯ ರದ್ದು; ಶೇ.50ರಷ್ಟು ಟಿಕೆಟ್ ಹಣ ಮರುಪಾವತಿ ಎಂದ KSCA

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ಮಳೆಯಿಂದಾಗಿ ಸ್ಥಗಿತವಾದ ಹಿನ್ನಲೆಯಲ್ಲಿ ಪಂದ್ಯ ವೀಕ್ಷಣೆಗಾಗಿ ಬಂದಿದ್ದ ಜನರ ಟಿಕೆಟ್ ದರ ಶೇ.50ರಷ್ಟು ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದೆ.

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ಮಳೆಯಿಂದಾಗಿ ಸ್ಥಗಿತವಾದ ಹಿನ್ನಲೆಯಲ್ಲಿ ಪಂದ್ಯ ವೀಕ್ಷಣೆಗಾಗಿ ಬಂದಿದ್ದ ಜನರ ಟಿಕೆಟ್ ದರ ಶೇ.50ರಷ್ಟು ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಭಾರತ- ದಕ್ಷಿಣ ಆಫ್ರಿಕಾ ಐದನೇ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿತು. ಪರಿಣಾಮ ಐದು ಪಂದ್ಯಗಳ ಟಿ20 ಸರಣಿಯು 2-2ರಿಂದ ಸಮಬಲಗೊಂಡಿದ್ದು, ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಕೇವಲ ಮೂರು ಓವರ್‌ಗಳಿಗೆ ಪಂದ್ಯ ರದ್ದುಗೊಂಡ ಪರಿಣಾಮ ವಿಷಾದ ವ್ಯಕ್ತಪಡಿಸಿದೆ. 

ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಒಂದು ಎಸೆತ ಆಗಿದ್ದರೂ ಸಹ ಮರುಪಾವತಿಯ ಪ್ರಶ್ನೆ ಇರುವುದಿಲ್ಲ. ಆದಾಗ್ಯೂ ಕೆಎಸ್‌ಸಿಎ ಕ್ರಿಕೆಟ್ ಅಭಿಮಾನಿಗಳಿಗೆ ಶೇ.50ರಷ್ಟು ಹಣ ನೀಡುವುದಾಗಿ ಘೋಷಣೆ ಮಾಡುವ ಇಂಗಿತ ವ್ಯಕ್ತಪಡಿಸಿದೆ. ಹೀಗಾಗಿ ಪಂದ್ಯದಲ್ಲಿ ಪಾವತಿಸಿದ ಎಲ್ಲಾ ಟಿಕೆಟ್‌ಗಳಿಗೆ ಶೇಕಡಾ 50ರಷ್ಟು ಮೊತ್ತವನ್ನು ಮರುಪಾವತಿಸಲು ಕೆಎಸ್ ಸಿಎ ನಿರ್ಧರಿಸಿದೆ. 

ದಿನಾಂಕ, ಸಮಯ ಮತ್ತು ಸ್ಥಳದೊಂದಿಗೆ ಮರುಪಾವತಿಗೆ ಸಂಬಂಧಿಸಿದಂತೆ ವಿಧಾನಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಎಲ್ಲಾ ಪಾವತಿಸಿದ ಟಿಕೆಟ್ ಹೊಂದಿರುವವರು ಮರುಪಾವತಿಯನ್ನು ಪಡೆಯಲು ತಮ್ಮ ಮೂಲ ಟಿಕೆಟ್‌ಗಳನ್ನು ಉಳಿಸಿಕೊಳ್ಳಲು ವಿನಂತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT