ಚಿನ್ನಸ್ವಾಮಿ ಕ್ರೀಡಾಂಗಣ 
ಕ್ರಿಕೆಟ್

ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ರದ್ದು ಹಿನ್ನೆಲೆ ಟಿಕೆಟ್ ಪಡೆದಿದ್ದವರಿಗೆ ಶೇ.50 ರಷ್ಟು ಹಣ ವಾಪಸ್!

ನೆನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಟಿಕೆಟ್ ಪಡೆದವರಿಗೆ ಶೇ.50 ರಷ್ಟು ಹಣ ವಾಪಸ್ ಸಿಗಲಿದೆ. 

ಬೆಂಗಳೂರು: ನೆನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಟಿಕೆಟ್ ಪಡೆದವರಿಗೆ ಶೇ.50 ರಷ್ಟು ಹಣ ವಾಪಸ್ ಸಿಗಲಿದೆ. 

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್ ಸಿಎ) ಈ ನಿರ್ಧಾರವನ್ನು ಘೋಷಿಸಿದೆ. 3.3 ಓವರ್ ಗಳ ಪಂದ್ಯದ ವೇಳೆಗೆ ಮಳೆಯ ಪರಿಣಾಮ ಪಂದ್ಯ ರದ್ದುಗೊಂಡಿತ್ತು. 5 ಪಂದ್ಯಗಳ ಸರಣಿ ಇದಾಗಿದ್ದು, ನೆನ್ನೆಯ ಪಂದ್ಯ ಅತ್ಯಂತ ಕುತೂಹಲ ಮೂಡಿಸಿತ್ತು. ಮಳೆಯ ಕಾರಣ ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಉಭಯ ತಂಡಗಳಿಗೂ ಅಂಕ ದೊರೆತು 2-2 ಅಂಕಗಳೊಂದಿಗೆ ಎರಡೂ ತಂಡಗಳಿಗೆ ಸಮಾನ ಅಂಕ ದೊರೆತಿದೆ.

ಷರತ್ತು ಮತ್ತು ನಿಬಂಧನೆಗಳ ಪ್ರಕಾರ ಕೇವಲ ಒಂದು ಎಸೆತ ಪೂರ್ಣಗೊಂಡು ಪಂದ್ಯ ರದ್ದಾದರೂ ಹಣ ವಾಪಸ್ ನೀಡಲು ಸಾಧ್ಯವಿಲ್ಲ. ಆದರೆ ಕೆಎಸ್ ಸಿಎ ಕ್ರೀಡಾಪ್ರೇಮಿಗಳಿಗೆ ಖರೀದಿಸಿದ್ದ ಟಿಕೆಟ್ ಗಳಿಗೆ ಶೇ.50 ರಷ್ಟು ಹಣ ವಾಪಸ್ ನೀಡಲು ನಿರ್ಧರಿಸಿದೆ ಎಂದು ಹೇಳಿದೆ.

ಮರುಪಾವತಿಗೆ ಸಂಬಂಧಿಸಿದ ವಿಧಾನಗಳು ದಿನಾಂಕವನ್ನು ಶೀಘ್ರವೇ ಘೋಷಣೆ ಮಾಡಲಾಗುತ್ತದೆ, ಹಣ ವಾಪಸ್ ಪಡೆಯುವುದಕ್ಕಾಗಿ ಮೂಲ ಟಿಕೆಟ್ ಗಳನ್ನು ಹಾಗೆಯೇ ಇರಿಸಿಕೊಂಡಿರಬೇಕು ಎಂದು ಕೆಎಸ್ ಸಿಎ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT