ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

ಪಾಕಿಸ್ತಾನದ ಪ್ರಾಬಲ್ಯ ಮುರಿದ ಭಾರತ: ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಸೂರ್ಯ ಕುಮಾರ್ ಯಾದವ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಅಡಿಲೇಡ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಎರಡು ಅರ್ಧಶತಕಗಳನ್ನು ಸಿಡಿಸಿದ ನಂತರ ಭಾರತದ ಸೂರ್ಯಕುಮಾರ್ ಯಾದವ್ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ T20I ಆಟಗಾರರ ಶ್ರೇಯಾಂಕದಲ್ಲಿ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ಸಿಡ್ನಿಯಲ್ಲಿ ನೆದರ್ಲೆಂಡ್ ವಿರುದ್ಧ 25 ಎಸೆತಗಳಲ್ಲಿ ಔಟಾಗದೆ 51 ರನ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಪರ್ತ್‌ನಲ್ಲಿ 40 ಎಸೆತಗಳಲ್ಲಿ 68 ರನ್ ಗಳಿಸಿದ ಯಾದವ್ ಅವರು ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ್ದಾರೆ. ಈ ಇಬ್ಬರು ಆಟಗಾರರು ಈ ವರ್ಷ ಸೆಪ್ಟೆಂಬರ್ 4 ರಿಂದ ಇಬ್ಬರು ಆಟಗಾರರು ಅಗ್ರ 2ಸ್ಥಾನವನ್ನು ಹೊಂದಿದ್ದರು. ಆದರೀಗ ಈ ಸ್ಥಾನಕ್ಕೆ ಸೂರ್ಯ ಕುಮಾರ್ ಯಾದವ್ ಪಡೆದಿದ್ದಾರೆ.

ಯಾದವ್ T20I ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ 23 ನೇ ಆಟಗಾರರಾಗಿದ್ದು, ಸೆಪ್ಟೆಂಬರ್ 2014 ರಿಂದ ಡಿಸೆಂಬರ್ 2017 ರವರೆಗೆ ವಿವಿಧ ಅವಧಿಗಳಲ್ಲಿ ಭಾರತದ ವಿರಾಟ್ ಕೊಹ್ಲಿ 1,013 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದರು. ಆವರ ಬಳಿಕ T20 ಕ್ರಿಕೆಟ್‌ನಲ್ಲಿ ನಂ. 1 ತಲುಪಿದ ಎರಡನೇ ಭಾರತೀಯ ಆಟಗಾರ ಎಂಬ ಕೀರ್ತಿಗೆ ಸೂರ್ಯ ಕುಮಾರ್ ಯಾದವ್ ಭಾಜನರಾಗಿದ್ದಾರೆ. ಪ್ರಸ್ತುತ ಸೂರ್ಯ ಕುಮಾರ್ ಯಾದವ್ 863 ರೇಟಿಂಗ್ ಅಂಕಗಳನ್ನು ಹೊಂದಿದ್ದು, ಇದು ಭಾರತೀಯ ಆಟಗಾರರ ಎರಡನೇ ಅತ್ಯುತ್ತಮ ರೇಟಿಂಗ್ ಆಗಿದೆ, ಸೆಪ್ಟೆಂಬರ್ 2014 ರಲ್ಲಿ ಕೊಹ್ಲಿ ಗಳಿಸಿದ 897 ರೇಟಿಂಗ್ ನೊಂದಿಗೆ ಅಗ್ರ ಸ್ಥಾನದಲ್ಲಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT