ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

ಪಾಕಿಸ್ತಾನದ ಪ್ರಾಬಲ್ಯ ಮುರಿದ ಭಾರತ: ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಸೂರ್ಯ ಕುಮಾರ್ ಯಾದವ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಅಡಿಲೇಡ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಎರಡು ಅರ್ಧಶತಕಗಳನ್ನು ಸಿಡಿಸಿದ ನಂತರ ಭಾರತದ ಸೂರ್ಯಕುಮಾರ್ ಯಾದವ್ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ T20I ಆಟಗಾರರ ಶ್ರೇಯಾಂಕದಲ್ಲಿ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ಸಿಡ್ನಿಯಲ್ಲಿ ನೆದರ್ಲೆಂಡ್ ವಿರುದ್ಧ 25 ಎಸೆತಗಳಲ್ಲಿ ಔಟಾಗದೆ 51 ರನ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಪರ್ತ್‌ನಲ್ಲಿ 40 ಎಸೆತಗಳಲ್ಲಿ 68 ರನ್ ಗಳಿಸಿದ ಯಾದವ್ ಅವರು ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ್ದಾರೆ. ಈ ಇಬ್ಬರು ಆಟಗಾರರು ಈ ವರ್ಷ ಸೆಪ್ಟೆಂಬರ್ 4 ರಿಂದ ಇಬ್ಬರು ಆಟಗಾರರು ಅಗ್ರ 2ಸ್ಥಾನವನ್ನು ಹೊಂದಿದ್ದರು. ಆದರೀಗ ಈ ಸ್ಥಾನಕ್ಕೆ ಸೂರ್ಯ ಕುಮಾರ್ ಯಾದವ್ ಪಡೆದಿದ್ದಾರೆ.

ಯಾದವ್ T20I ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ 23 ನೇ ಆಟಗಾರರಾಗಿದ್ದು, ಸೆಪ್ಟೆಂಬರ್ 2014 ರಿಂದ ಡಿಸೆಂಬರ್ 2017 ರವರೆಗೆ ವಿವಿಧ ಅವಧಿಗಳಲ್ಲಿ ಭಾರತದ ವಿರಾಟ್ ಕೊಹ್ಲಿ 1,013 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದರು. ಆವರ ಬಳಿಕ T20 ಕ್ರಿಕೆಟ್‌ನಲ್ಲಿ ನಂ. 1 ತಲುಪಿದ ಎರಡನೇ ಭಾರತೀಯ ಆಟಗಾರ ಎಂಬ ಕೀರ್ತಿಗೆ ಸೂರ್ಯ ಕುಮಾರ್ ಯಾದವ್ ಭಾಜನರಾಗಿದ್ದಾರೆ. ಪ್ರಸ್ತುತ ಸೂರ್ಯ ಕುಮಾರ್ ಯಾದವ್ 863 ರೇಟಿಂಗ್ ಅಂಕಗಳನ್ನು ಹೊಂದಿದ್ದು, ಇದು ಭಾರತೀಯ ಆಟಗಾರರ ಎರಡನೇ ಅತ್ಯುತ್ತಮ ರೇಟಿಂಗ್ ಆಗಿದೆ, ಸೆಪ್ಟೆಂಬರ್ 2014 ರಲ್ಲಿ ಕೊಹ್ಲಿ ಗಳಿಸಿದ 897 ರೇಟಿಂಗ್ ನೊಂದಿಗೆ ಅಗ್ರ ಸ್ಥಾನದಲ್ಲಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT