ಅಡಿಲೇಡ್: ಟಿ20 ವಿಶ್ವಕಪ್ ಸರಣಿ ನಿರ್ಣಾಯಕ ಹಂತ ತಲುಪುತ್ತಿದ್ದು, ಇಂದು ಗ್ರೂಪ್ 2ನ 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಬಾಂಗ್ಲಾದೇಶ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆಸ್ಚ್ರೇಲಿಯಾದ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂತೆಯೇ ಭಯ ತಂಡಗಳಲ್ಲಿ ತಲಾ ಒಂದು ಬದಲಾವಣೆ ಮಾಡಲಾಗಿದ್ದು, ಬಾಂಗ್ಲಾದೇಶದಲ್ಲಿ ಸೌಮ್ಯ ಸರ್ಕಾರ ಬದಲಿಗೆ ಶೋರಿಫುಲ್ ಇಸ್ಲಾಂ ಕಣಕ್ಕಿಳಿದಿದ್ದು, ಭಾರತದ ಪರ ಹೂಡಾ ಬದಲಿಗೆ ಅಕ್ಸರ್ ಪಟೇಲ್ ಕಣಕ್ಕಿಳಿಯಲಿದ್ದಾರೆ.
ತಂಡಗಳು ಇಂತಿವೆ:
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್(ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್(ವಿಕೆಟ್ ಕೀಪರ್), ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್