ಭಾರತಕ್ಕೆ ಜಯ 
ಕ್ರಿಕೆಟ್

ಟಿ20 ವಿಶ್ವಕಪ್: ಮಳೆ ಅಡ್ಡಿ ಹೊರತಾಗಿಯೂ, ಬಾಂಗ್ಲಾ ಗೆಲುವು ಕಸಿದ ಭಾರತ, 5 ರನ್ ಗಳ ರೋಚಕ ಜಯ

ಅಡಿಲೇಡ್ ಓವಲ್‌ ಮೈದಾನದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಮಳೆಕಾಟದ ಹೊರತಾಗಿಯೂ ಭಾರತ ತಂಡ ಭರ್ಜರಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

ಅಡಿಲೇಡ್: ಅಡಿಲೇಡ್ ಓವಲ್‌ ಮೈದಾನದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಮಳೆಕಾಟದ ಹೊರತಾಗಿಯೂ ಭಾರತ ತಂಡ ಭರ್ಜರಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

ಟೀಂ ಇಂಡಿಯಾ ನೀಡಿದ್ದ 185ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಬಾಂಗ್ಲಾದೇಶ ಭರ್ಜರಿ ಆರಂಭ ಪಡೆದಿತ್ತು. ಬಾಂಗ್ಲಾಪರ ಆರಂಭಿಕ ಆಟಗಾರ ಲಿಟನ್ ದಾಸ್ ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 60ರನ್ ಗಳಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ನಜ್ಮಲ್ ಹುಸೇನ್ ಶಾಂತೋ 25 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 1 ಬೌಂಡರಿ ನೆರವಿನಿಂದ 21 ರನ್ ಗಳಿಸಿದರು. ಇಬ್ಬರೂ ಅಪಾಯಕಾರಿಯಾಗುತ್ತಿದ್ದಾರೆ ಎನ್ನುವ ಹೊತ್ತಿಗೆ ಮಳೆ ಆಗಮಿಸಿತು. ಸುಮಾರು ಅರ್ಧಗಂಟೆಗಳ ಕಾಲ ಸುರಿದ ಮಳೆ ಬಳಿಕ ನಿಂತಿತು. 

ಈ ಹಂತದಲ್ಲಿ ಮೈದಾನಕ್ಕಿಳಿದ ಅಂಪೈರ್ ಗಳು ಬಾಂಗ್ಲಾ ಇನ್ನಿಂಗ್ಸ್ ಮೊಟಕುಗೊಳಿಸಿರು. ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಬಾಂಗ್ಲಾಗೆ 16 ಓವರ್ ನಲ್ಲಿ 151ರನ್ ಗಳ ಗುರಿ ನೀಡಲಾಯಿತು. ಈ ಹಂತದಲ್ಲಿ ಕಣಕ್ಕಿಳಿದ ಬಾಂಗ್ಲಾದೇಶಕ್ಕೆ ಆರಂಭದಲ್ಲೇ ಭಾರತ ಆಘಾತ ನೀಡಿತು. 60ರನ್ ಗಳಿಸಿ ಅಪಾಯಕಾರಿಯಾಗಿದ್ದ ಲಿಟನ್ ದಾಸ್ ರನ್ನು ಕೆಎಲ್ ರಾಹುಲ್ ರನೌಟ್ ಮಾಡಿದರು. ಇವರ ಬೆನ್ನಲ್ಲೇ ಮತ್ತೋರ್ವ ಆಟಗಾರ ನಜ್ಮಲ್ ಹುಸೇನ್ ಶಾಂತೋ ಕೂಡ 21 ರನ್ ಗಳಿಸಿ ಶಮಿ ಬೌಲಿಂಗ್ ನಲ್ಲಿ ಔಟಾದರು. 

ಈ ಹಂತದಲ್ಲಿ ಆರಿಫ್ ಹೊಸೈನ್ ಜೊತೆಗೂಡಿದ ನಾಯಕ ಶಕೀಬ್ ಅಲ್ ಹಸನ್ ಕೊಂಚ ಪ್ರತಿರೋಧ ತೋರಿದರಾದರೂ, ಅರ್ಶ್ ದೀಪ್ ಸಿಂಗ್ ಬೌಲಂಗ್ ನಲ್ಲಿ ಔಟಾಗಿದ್ದು ಬಾಂಗ್ಲಾದೇಶಕ್ಕೆ ನುಂಗಲಾರದ ತುತ್ತಾಯಿತು. ಇವರ ಬೆನ್ನಲ್ಲೇ ನಾಯಕ ಶಕೀಬ್ ಕೂಡ 13 ರನ್ ಗಳಿಸಿ ಮತ್ತೆ ಅರ್ಶ್ ದೀಪ್ ಸಿಂಗ್ ಬೌಲಿಂದ್ ನಲ್ಲಿ ಔಟಾದರು. ಇವರ ಬೆನ್ನಲ್ಲೇ 1ರನ್ ಗಳಿಸಿದ್ದ ಯಾಸಿರ್ ಅಲಿ ಹಾರ್ದಿಕ್ ಪಾಂಡ್ಯಾ ಬೌಲಿಂಗ್ ನಲ್ಲಿ ಔಟಾದರು. ಬಳಿಕ 6 ರನ್ ಗಳಿಸಿದ್ದ ಮೊಸಾದಕ್ ಹುಸೇನ್ ಕೂಡ ಪಾಂಡ್ಯ ಬೌಲಿಂಗ್ ನಲ್ಲಿ ಔಟಾಗುವುದರೊಂದಿಗೆ ಬಾಂಗ್ಲಾದೇಶಕ್ಕೆ ಸೋಲಿನ ಭೀತಿ ಎದುರಾಗಿತ್ತು. ಈ ಹಂತದಲ್ಲಿ ಜೊತೆಗೂಡಿದ ನೂರುಲ್ ಹುಸೇನ್ ಮತ್ತು ಟಸ್ಕಿನ್ ಅಹ್ಮದ್ ಮತ್ತೆ ಬಾಂಗ್ಲಾ ಪಾಳಯದಲ್ಲಿ ಗೆಲುವಿನ ಆಸೆ ಚಿಗುರಿಸಿದರು.

ಗೆಲಲ್ಲು 12 ಎಸೆತಗಳಲ್ಲಿ 31ರನ್ ಬೇಕಿದ್ದಾಗ ಪಾಂಡ್ಯಾ ಎಸೆದ 15ನೇ ಓವರ್ ನಲ್ಲಿ ಈ ಜೋಡಿ 11 ರನ್ ಚಚ್ಚಿತು. ಅಂತಿಮ ಓವರ್ ನಲ್ಲಿ ಗೆಲ್ಲಲು 6 ಎಸೆತಗಳಲ್ಲಿ 20ರನ್ ಬೇಕಿದ್ದಾಗ 1 ಸಿಕ್ಸ್ 1 ಬೌಂಡರಿ ಸಹಿತ 14 ರನ್ ಗಳಿಸಿ ಕೇವಲ 5ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿತು.

ಈ ಪಂದ್ಯದ ಗೆಲುವಿನೊಂದಿಗೆ ಟೂರ್ನಿಯಲ್ಲಿ ಭಾರತದ ಸಮೀಸ್ ಆಸೆ ಮತ್ತಷ್ಟು ಗಟ್ಟಿಯಾದಂತಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT