ಭಾರತ ತಂಡ 
ಕ್ರಿಕೆಟ್

ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಸೆಮಿಫೈನಲ್‌ ಪ್ರವೇಶ

ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧ 71 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾನುವಾರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಈ ಮೂಲಕ 'ಎ' ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್‌...

ಮೆಲ್ಬರ್ನ್: ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧ 71 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾನುವಾರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಈ ಮೂಲಕ 'ಎ' ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್‌ ಎದುರು ಸೆಮಿಫೈನಲ್‌ ಪಂದ್ಯವನ್ನು ಆಡಲಿದೆ. 

ಇಂದು ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ಭಾರತ, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕ(61)ದ ನೆರವಿನೊಂದಿಗೆ  ನಿಗದಿತ 20 ಓವರ್​ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 186 ರನ್ ಕಲೆ ಹಾಕಿತು.

ಗೆಲುವಿಗೆ 187 ರನ್ ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ ಸತತ ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ 17.2 ಓವರ್‌ಗಳಲ್ಲಿ 115 ರನ್‌ಗಳಿಗೆ ಆಲ್‌ಔಟ್‌ ಆಗುವ ಮೂಲಕ ಹೀನಾಯ ಸೋಲು ಅನುಭವಿಸಿತು.

ಭಾರತದ ಪರ ಅಶ್ವಿನ್​ 3 ವಿಕೆಟ ಪಡೆದರೆ, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಹಾಗೂ ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಲಾ 1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇನ್ನು ಕೆಎಲ್ ರಾಹುಲ್ 51 ರನ ಗಳಿಸಿದರೆ, ಸೂರ್ಯಕುಮಾರ್ ಯಾದವ್ 25 ಎಸೆತದಲ್ಲಿ 4 ಸಿಕ್ಸ್ 6 ಬೌಂಡರಿಗಳ ನೆರವಿನಿಂದ ಅಜೇಯರಾಗಿ 61 ರನ್ ಗಳಿಸಿದರು. ಉಳಿದಂತೆ ನಾಯಕ ರೋಹಿತ್ ಶರ್ಮಾ 15 ರನ್, ವಿರಾಟ್ ಕೊಹ್ಲಿ 26 ರನ್, ರಿಷಭ್ ಪಂತ್ 3 ರನ್ ಮತ್ತು ಹಾರ್ದಿಕ್ ಪಾಂಡ್ಯ 18 ರನ್ ಗಳಿಸಿ ಮಿಂಚಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT