ದನುಷ್ಕಾ ಗುಣತಿಲಕ 
ಕ್ರಿಕೆಟ್

ಸಿಡ್ನಿ: ಅತ್ಯಾಚಾರ ಆರೋಪ, ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಬಂಧನ- ವರದಿ

ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ಅವರಿಲ್ಲದೆ ಶ್ರೀಲಂಕಾ ತಂಡ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ ಎಂದು ತಂಡದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಸಿಡ್ನಿ: ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ಅವರಿಲ್ಲದೆ ಶ್ರೀಲಂಕಾ ತಂಡ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ ಎಂದು ತಂಡದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಕಳೆದ ವಾರ ಸಿಡ್ನಿಯಲ್ಲಿ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ಸುಮಾರು 1 ಗಂಟೆ ಸುಮಾರಿನಲ್ಲಿ  ದನುಷ್ಕಾ ಗುಣತಿಲಕ ತಂಗಿದ್ದ ಹೋಟೆಲ್ ನಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ರೋಸ್ ಬೇಯಲ್ಲಿರುವ ಮನೆಯಲ್ಲಿ 29 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯಕ್ಕೊಳಗಾದ ವರದಿಗಳ ನಂತರ  ರಾಜ್ಯ ಅಪರಾಧ ಕಮಾಂಡ್‌ನ ಲೈಂಗಿಕ ಅಪರಾಧಗಳ ಸ್ಕ್ವಾಡ್ ಮತ್ತು ಪೂರ್ವ ಉಪನಗರ ಪೊಲೀಸ್ ಏರಿಯಾ ಕಮಾಂಡ್‌ನ ಡಿಟೆಕ್ಟಿವ್‌ಗಳು ಜಂಟಿ ತನಿಖೆಯನ್ನು ಪ್ರಾರಂಭಿಸಿದರು.

ಮಹಿಳೆಯು ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್ ಮೂಲಕ  ಗುಣತಿಲಕ ಅವರೊಂದಿಗೆ ಹಲವಾರು ದಿನಗಳವರೆಗೆ ಮೇಸೆಜ್ ವಿನಿಮಯ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಇವರಿಬ್ಬರೂ ಬುಧವಾರ ಭೇಟಿಯಾಗಿದ್ದು,  ದನುಷ್ಕಾ ಗುಣತಿಲಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. 

ಶನಿವಾರ ಅಪರಾಧ ನಡೆದ ಸ್ಥಳ ಪರಿಶೀಲಿಸಲಾಗಿದ್ದು, ಗುಣತಿಲಕ ಅವರನ್ನು ಸಿಡ್ನಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು ಮತ್ತು ಒಪ್ಪಿಗೆಯಿಲ್ಲದೆ ನಾಲ್ಕು ಬಾರಿ ಲೈಂಗಿಕ ಸಂಭೋಗ ನಡೆಸಿರುವ ಆರೋಪ ಕೇಳಿಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT