ಗ್ಲೇನ್ ಮ್ಯಾಕ್ಸ್ ವೆಲ್ 
ಕ್ರಿಕೆಟ್

ಹುಟ್ಟುಹಬ್ಬದ ಪಾರ್ಟಿಯಲ್ಲಿ ಸ್ವಲ್ಪದರಲ್ಲೇ ಪಾರಾದ ಮ್ಯಾಕ್ಸ್‌ವೆಲ್: ಕಾಲಿಗೆ ಶಸ್ತ್ರಚಿಕಿತ್ಸೆ!

ಆರ್ ಸಿಬಿ ತಂಡ ಆಲೌರಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಸ್ನೇಹಿತನ 50ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಪಘಾತಕ್ಕೆ ಒಳಗಾಗಿದ್ದು ಸ್ವಲ್ಪದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೆಲ್ಬೋರ್ನ್: ಆರ್ ಸಿಬಿ ತಂಡ ಆಲೌರಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಸ್ನೇಹಿತನ 50ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಪಘಾತಕ್ಕೆ ಒಳಗಾಗಿದ್ದು ಸ್ವಲ್ಪದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಅಪಘಾತದಲ್ಲಿ ಮ್ಯಾಕ್ಸ್‌ವೆಲ್ ಕಾಲು ಮುರಿದಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಅವರು ಮೂರು ತಿಂಗಳ ಕಾಲ ಮೈದಾನದಿಂದ ದೂರ ಉಳಿಯಲಿದ್ದಾರೆ. ಈ ವಾರ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಮ್ಯಾಕ್ಸ್‌ವೆಲ್ ಹೊರಗುಳಿದಿದ್ದು, ಮುಂದಿನ ವರ್ಷ ಭಾರತ ಪ್ರವಾಸಕ್ಕೂ ಸೇರಿಸಿಕೊಳ್ಳುವ ಬಗ್ಗೆ ಅನುಮಾನವಿದೆ.

Cricket.com.au ಪ್ರಕಾರ, ಗ್ಲೆನ್ ಮ್ಯಾಕ್ಸ್‌ವೆಲ್ ತನ್ನ ಸ್ನೇಹಿತನೊಂದಿಗೆ ಟೆನ್ನಿಸ್ ಕೋರ್ಟ್ ನಲ್ಲಿ ರನ್ನಿಂಗ್ ಮಾಡುವ ವೇಳೆ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ. ಇದರಲ್ಲಿ ಮ್ಯಾಕ್ಸ್‌ವೆಲ್‌ ಅವರ ಎಡಗಾಲಿನ ಮೇಲೆ ಅವರ ಸ್ನೇಹಿತ ಕಾಲಿಟ್ಟಿದ್ದರಿಂದ ಮ್ಯಾಕ್ಸ್ ವೆಲ್ ಎಡಗಾಲು ಮುರಿದಿದ್ದು, ಈ ಗಾಯ ತುಂಬಾ ಗಂಭೀರವಾಗಿದ್ದರಿಂದ ಇಂದು ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಮುಂದಿನ 12 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಬೇಕಿದೆ.

ಮುಂದಿನ ವರ್ಷ ಫೆಬ್ರುವರಿ-ಮಾರ್ಚ್‌ನಲ್ಲಿ ಭಾರತ ಪ್ರವಾಸದ ವೇಳೆ ಆಸ್ಟ್ರೇಲಿಯಾ ನಾಲ್ಕು ಟೆಸ್ಟ್‌ಗಳು ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಭಾರತ ಪ್ರವಾಸ ಅನುಮಾನಾಸ್ಪದ ಎಂದು ಪರಿಗಣಿಸಲಾಗಿದೆ. 

ಆಸ್ಟ್ರೇಲಿಯಾ ಪರ ಮ್ಯಾಕ್ಸ್‌ವೆಲ್ ಇತ್ತೀಚೆಗೆ T20 ವಿಶ್ವಕಪ್‌ನಲ್ಲಿ 32 ಎಸೆತಗಳಲ್ಲಿ ಅಜೇಯ 54 ರನ್ ಗಳಿಸಿದ್ದು ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದರು. ಆದರೂ 20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಪ್ರಯಾಣವು ಗುಂಪು ಹಂತದಲ್ಲೇ ಕೊನೆಗೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT