ಬಾಬರ್ ಅಜಮ್ 
ಕ್ರಿಕೆಟ್

ನಾಯಕತ್ವ ಬಿಟ್ಟು ಬ್ಯಾಟಿಂಗ್ ಕಡೆ ಗಮನ ಹರಿಸು: ಪಾಕ್ ನಾಯಕನಿಗೆ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಸಲಹೆ!

2022ರ ಟಿ20 ವಿಶ್ವಕಪ್‌ನ ಫೈನಲ್ ಗೆ ಪ್ರವೇಶಿಸಿದ್ದ ಪಾಕಿಸ್ತಾನ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಗಳಿಂದ ಸೋಲು ಕಂಡಿತ್ತು. ಇದಾದ ನಂತರ ಹಲವು ಆಟಗಾರರು ಪಾಕ್ ನಾಯಕನಿಗೆ ನಾಯಕತ್ವ ತ್ಯಜಿಸುವಂತೆ ಸಲಹೆಗಳನ್ನು ನೀಡುತ್ತಿದ್ದಾರೆ.

ಇಸ್ಲಾಮಾಬಾದ್: 2022ರ ಟಿ20 ವಿಶ್ವಕಪ್‌ನ ಫೈನಲ್ ಗೆ ಪ್ರವೇಶಿಸಿದ್ದ ಪಾಕಿಸ್ತಾನ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಗಳಿಂದ ಸೋಲು ಕಂಡಿತ್ತು. ಇದಾದ ನಂತರ ಹಲವು ಆಟಗಾರರು ಪಾಕ್ ನಾಯಕನಿಗೆ ನಾಯಕತ್ವ ತ್ಯಜಿಸುವಂತೆ ಸಲಹೆಗಳನ್ನು ನೀಡುತ್ತಿದ್ದಾರೆ. 

ಪಾಕಿಸ್ತಾನದ ಮಾಜಿ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ಕಮ್ರಾನ್ ಅಕ್ಮಲ್ ಹೊರತುಪಡಿಸಿ, ಅನೇಕ ಪಾಕ್ ಆಟಗಾರರು ಬಾಬರ್ ಅಜಮ್‌ಗೆ ನಾಯಕತ್ವವನ್ನು ತೊರೆಯುವಂತೆ ಸಲಹೆ ನೀಡುತ್ತಿದ್ದು ಇದೀಗ ಈ ಸಾಲಿಗೆ ಮಾಜಿ ನಾಯಕ ಶಾಹಿದ್ ಅಫ್ರಿದಿ ಸೇರಿದ್ದಾರೆ. 

ಬಾಬರ್ ಅಜಮ್ ನಾಯಕತ್ವ ತ್ಯಜಿಸುವುದು ಒಳ್ಳೆಯದ್ದು
ವಾಸ್ತವವಾಗಿ, ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರು ಬಾಬರ್ ಅಜಮ್ ಗೆ ನಾಯಕತ್ವ ಬಿಟ್ಟು ಬ್ಯಾಟಿಂಗ್‌ನತ್ತ ಗಮನ ಹರಿಸಿ ಎಂದು ಸಲಹೆ ನೀಡಿದ್ದಾರೆ. ಬಾಬರ್ ಅಜಮ್ ಹೊರತುಪಡಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವ ವಹಿಸಲು ಅನೇಕ ಆಟಗಾರರಿದ್ದಾರೆ. ಶಾದಾಬ್ ಖಾನ್, ಮೊಹಮ್ಮದ್ ರಿಜ್ವಾನ್ ಮತ್ತು ಶಾನ್ ಮಸೂದ್ ಅವರಂತಹ ಆಟಗಾರರು ಈ ತಂಡದ ನಾಯಕತ್ವದ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಕಾರಣಕ್ಕಾಗಿ, ಬಾಬರ್ ಅಜಮ್ ನಾಯಕತ್ವವನ್ನು ತೊರೆದು ತಮ್ಮ ಬ್ಯಾಟಿಂಗ್‌ನತ್ತ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅಬ್ಬರಿಸದ ಬಾಬರ್ ಅಜಮ್
ಬಾಬರ್ ಅಜಮ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡ T20 ವಿಶ್ವಕಪ್‌ನಲ್ಲಿ ಫೈನಲ್ ತಲುಪಿತ್ತು. ಆದರೆ, ಇಂಗ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸೋಲನುಭವಿಸಬೇಕಾಯಿತು. ಅದೇ ಸಮಯದಲ್ಲಿ, ಈ ಪಂದ್ಯಾವಳಿಯುದ್ದಕ್ಕೂ, ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಕಳಪೆ ಬ್ಯಾಟಿಂಗ್ ಫಾರ್ಮ್ ಹೊಂದಿದ್ದರು. ವಾಸ್ತವವಾಗಿ ನಾಯಕತ್ವದ ಒತ್ತಡದಿಂದಾಗಿ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಿಲ್ಲ ಎಂದು ಅನೇಕ ಮಾಜಿ ಆಟಗಾರರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT