ಭಾರತದ ಕ್ರಿಕೆಟ್ ಅಭಿಮಾನಿಗಳು 
ಕ್ರಿಕೆಟ್

ನ್ಯೂಜಿಲೆಂಡ್- ಭಾರತ ಮೊದಲ ಟಿ-20 ಪಂದ್ಯ ಆರಂಭಕ್ಕೆ ಮಳೆ ಅಡ್ಡಿ

ಭಾರತ - ನ್ಯೂಜಿಲೆಂಡ್ ನಡುವಿನ ಮೊದಲ ಟಿ-20 ಪಂದ್ಯ ಆರಂಭಕ್ಕೆ ಮಳೆ ಅಡ್ಡಿಯಾಗಿದೆ. ಟಿ-20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಸೋತ ಬಳಿಕ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ನಡೆಯುತ್ತಿದ್ದು, ಇಲ್ಲಿನ ಸ್ಕೈ ಕ್ರೀಡಾಂಗಣಕ್ಕೆ ಅಪಾರ ಸಂಖ್ಯೆಯಲ್ಲಿ ಭಾರತದ ಕ್ರಿಕೆಟ್ ಅಭಿಮಾನಿಗಳು ಆಗಮಿಸಿದ್ದಾರೆ.

ವೆಲ್ಲಿಂಗ್ ಟನ್: ಭಾರತ - ನ್ಯೂಜಿಲೆಂಡ್ ನಡುವಿನ ಮೊದಲ ಟಿ-20 ಪಂದ್ಯ ಆರಂಭಕ್ಕೆ ಮಳೆ ಅಡ್ಡಿಯಾಗಿದೆ. ಟಿ-20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಸೋತ ಬಳಿಕ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ನಡೆಯುತ್ತಿದ್ದು, ಇಲ್ಲಿನ ಸ್ಕೈ ಕ್ರೀಡಾಂಗಣಕ್ಕೆ ಅಪಾರ ಸಂಖ್ಯೆಯಲ್ಲಿ ಭಾರತದ ಕ್ರಿಕೆಟ್ ಅಭಿಮಾನಿಗಳು ಆಗಮಿಸಿದ್ದಾರೆ.

ಆದರೆ, ಮಳೆಯಿಂದ ಮೈದಾನ ಒದ್ದೆಯಾಗಿರುವುದರಿಂದ ಟಾಸ್ ವಿಳಂಬವಾಗಿದೆ. ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಈ ಪಂದ್ಯದ ನಾಯಕತ್ವ ವಹಿಸಿದ್ದಾರೆ. ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಅವರಿಗೂ ವಿಶ್ರಾಂತಿ ನೀಡಲಾಗಿದೆ.

ನ್ಯೂಜಿಲೆಂಡ್ ನಲ್ಲಿ ಟೀಂ ಇಂಡಿಯಾ ಭಯಬಿಟ್ಟು ಆಟವಾಡಬೇಕಿದೆ ಎಂದು ಕೋಚ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ. ಟಿ-20 ಮಾದರಿಯಲ್ಲಿ ಭಯ ಬಿಟ್ಟು ಸ್ವತಂತ್ರವಾಗಿ ಆಡಬೇಕಾದ ಅಗತ್ಯವಿದೆ. ಇದೇ ವೇಳೆ ತಂಡದ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳುವುದು ಪ್ರಮುಖವಾಗಿದೆ ಎಂದು ಮುಖ್ಯ ಕೋಚ್ ವಿವಿಎಸ್ ಲಕ್ಷ್ಮಣ್ ಸಲಹೆ ನೀಡಿದ್ದಾರೆ. ಟಿ-20 ವಿಶ್ವಕಪ್ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿಶ್ರಾಂತಿಯಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT