ರುತುರಾಜ್ ಗಾಯಕ್ವಾಡ್ 
ಕ್ರಿಕೆಟ್

ಒಂದೇ ಓವರ್‌ನಲ್ಲಿ 43 ರನ್, 7 ಸಿಕ್ಸರ್ ಮೂಲಕ ರುತುರಾಜ್ ಗಾಯಕ್ವಾಡ್ ವಿಶ್ವದಾಖಲೆ; ವಿಡಿಯೋ ವೈರಲ್!

ಇದುವರೆಗೆ ಯಾವ ಕ್ರಿಕೆಟಿಗನೂ ಮಾಡದ ಸಾಧನೆಯನ್ನು ರುತುರಾಜ್ ಗಾಯಕ್ವಾಡ್ ಮಾಡಿದ್ದಾರೆ. ಮಹಾರಾಷ್ಟ್ರದ ಯುವ ಆರಂಭಿಕ ಆಟಗಾರ ವಿಜಯ್ ಹಜಾರೆ ಟ್ರೋಫಿ 2022 ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರ ಪ್ರದೇಶ ವಿರುದ್ಧ ಒಂದೇ ಓವರ್‌ನಲ್ಲಿ ಸತತ 7 ಸಿಕ್ಸರ್‌ಗಳನ್ನು ಬಾರಿಸಿ ದಾಖಲೆ ಬರೆದಿದ್ದಾರೆ.

ನವದೆಹಲಿ: ಇದುವರೆಗೆ ಯಾವ ಕ್ರಿಕೆಟಿಗನೂ ಮಾಡದ ಸಾಧನೆಯನ್ನು ರುತುರಾಜ್ ಗಾಯಕ್ವಾಡ್ ಮಾಡಿದ್ದಾರೆ. ಮಹಾರಾಷ್ಟ್ರದ ಯುವ ಆರಂಭಿಕ ಆಟಗಾರ ವಿಜಯ್ ಹಜಾರೆ ಟ್ರೋಫಿ 2022 ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರ ಪ್ರದೇಶ ವಿರುದ್ಧ ಒಂದೇ ಓವರ್‌ನಲ್ಲಿ ಸತತ 7 ಸಿಕ್ಸರ್‌ಗಳನ್ನು ಬಾರಿಸಿ ದಾಖಲೆ ಬರೆದಿದ್ದಾರೆ. 

ನೋ ಬಾಲ್‌ ಸೇರಿದಂತೆ 7 ಎಸೆತಗಳಲ್ಲಿ 7 ಸಿಕ್ಸರ್ ಬಾರಿಸಿದ್ದಾರೆ. ಒಂದೇ ಓವರ್‌ ನಲ್ಲಿ ಒಟ್ಟು 43 ರನ್ ಗಳಿಸಲಾಯಿತು. ಇದರೊಂದಿಗೆ ಪಂದ್ಯದಲ್ಲಿ ದ್ವಿಶತಕವನ್ನೂ ಪೂರೈಸಿದರು. ಶಿವ ಸಿಂಗ್ ಎಸೆದ ಇನಿಂಗ್ಸ್ ನ 49ನೇ ಓವರ್ ಗಾಯಕ್ವಾಡ್ ಈ ಸಾಧನೆ ಮಾಡಿದರು.

ಬೌಂಡರಿಗಿಂತಲೂ ಹೆಚ್ಚು ಸಿಕ್ಸರ್ ಸಿಡಿಸಿದ ರುತುರಾಜ್
ರುತುರಾಜ್ 159 ಎಸೆತಗಳಲ್ಲಿ 10 ಬೌಂಡರಿ ಮತ್ತು 16 ಸಿಕ್ಸರ್‌ಗಳ ನೆರವಿನಿಂದ 220 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನು ಮಹಾರಾಷ್ಟ್ರ 50 ಓವರ್‌ಗಳಲ್ಲಿ 330 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು. 2007ರ T20 ವಿಶ್ವಕಪ್ ನಲ್ಲಿ ಯುವರಾಜ್ ಸಿಂಗ್ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ ನ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ ಬಾರಿಸಿದ್ದರು. ಆದರೆ ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಈ ಹಿಂದೆಯೇ ಮೊದಲು ದೇಶೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದರು. ಇದೀಗ ಗಾಯಕ್ವಾಡ್ ಒಂದು ಓವರ್‌ನಲ್ಲಿ 7 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ದಾಖಲೆ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅವರು ಈ ದಾಖಲೆ ಮಾಡಿದ್ದಾರೆ. ಮಹಾರಾಷ್ಟ್ರ ಆರಂಭ ಉತ್ತಮವಾಗಿರಲಿಲ್ಲ. ಮೊದಲಿಗೆ ರಾಹುಲ್ ತ್ರಿಪಾಠಿ 9 ರನ್ ಗೆ ಔಟಾದರು. ನಂತರ ಕಾರ್ತಿಕ್ ತ್ಯಾಗಿ 11 ರನ್ ಗಳಿಸಿ ಔಟಾದರು. ಇದಾದ ನಂತರ ಬವಾನೆ ಮತ್ತು ಕಾಜಿ ಅವರ ವಿಕೆಟ್‌ಗಳು ಕೂಡ ಬೇಗನೆ ಪತನಗೊಂಡವು, ಆದರೆ ರುತುರಾಜ್ ಇನ್ನೊಂದು ತುದಿಯಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆಯುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT