ಆಫ್ರಿಕಾಗೆ ಜಯ 
ಕ್ರಿಕೆಟ್

3ನೇ ಟಿ20: ಭಾರತದ ವಿರುದ್ಧ ದ.ಆಫ್ರಿಕಾಗೆ 49 ರನ್ ಗಳ ಭರ್ಜರಿ ಜಯ, ಟಿ20 ಸರಣಿ ಟೀಂ ಇಂಡಿಯಾ ತೆಕ್ಕೆಗೆ

ಭಾರತದ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 49ರನ್ ಗಳ ಗೆಲುವು ಸಾಧಿಸಿದೆ. ಆ ಮೂಲಕ 2-1 ಅಂತರದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಜಯಿಸಿದೆ.

ಇಂದೋರ್: ಭಾರತದ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 49ರನ್ ಗಳ ಗೆಲುವು ಸಾಧಿಸಿದೆ. ಆ ಮೂಲಕ 2-1 ಅಂತರದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಜಯಿಸಿದೆ.

ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್ ರಿಲೋ ರೋಸೋ ಶತಕ ಹಾಗೂ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ರ ಅಬ್ಬರಕ್ಕೆ ಟೀಂ ಇಂಡಿಯಾ ಲೆಕ್ಕಾಚಾರ ಉಲ್ಟಾ ಆಗಿದ್ದು, ಆಫ್ರಿಕಾ ನೀಡಿದ 228ರನ್ ಬೃಹತ್ ಮೊತ್ತ ಚೇಸ್ ಮಾಡಲು ಟೀಂ ಇಂಡಿಯಾ ಹರಸಾಹಸ ಪಟ್ಟಿತು. ದಿನೇಶ್ ಕಾರ್ತಿಕ್, ದೀಪಕ್ ಚಹಾರ್ ಹೋರಾಟ ನಡೆಸಿದರೂ ಸಾಧ್ಯವಾಗಲಿಲ್ಲ.

ಕೊನೆಗೆ ಟೀಂ ಇಂಡಿಯಾ 18.3 ಓವರ್‌ಗಳಲ್ಲಿ 178 ರನ್ ಸಿಡಿಸಿ ಆಲೌಟ್ ಆಯಿತು. ಇದರೊಂದಿಗೆ ಸೌತ್ ಆಫ್ರಿಕಾ 49 ರನ್ ಗೆಲುವು ದಾಖಲಿಸಿತು. ಅಂತಿಮ ಟಿ20 ಪಂದ್ಯ ಗೆದ್ದು ಟಿ20 ಸರಣಿ ಕ್ಲೀನ್ ಸ್ಪೀಪ್ ಗುರಿ ಹೊಂದಿದ್ದ ಟೀಂ ಇಂಡಿಯಾ ಇದೀಗ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.  

ಆಫ್ರಿಕಾ ನೀಡಿದ ಬೃಹತ್ ಮೊತ್ತ ಬೆನ್ನು ಹತ್ತಿದ ಭಾರತ ತಂಡ ರೋಹಿತ್ ಶರ್ಮಾ ವಿಕೆಟ್ ಪತನದ ಮೂಲಕ ಆರಂಭಿಕ ಆಘಾತ ಎದುರಿಸಿತು. ಬಳಿಕ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಭಾರತ ತಂಡಕ್ಕೆ ದಿನೇಶ್ ಕಾರ್ತಿಕ್ ಮತ್ತು ದೀಪಕ್ ಚಹರ್ ಆಸರೆಯಾದರೂ ಆವರ ಆಟ ಕೂಡ ಹೆಚ್ಚು ಹೊತ್ತ ಸಾಗಲಿಲ್ಲ.

ದಿನೇಶ್ ಕಾರ್ತಿಕ್ 46 ರನ್ ಗಳಿಸಿ ಔಟಾದರೆ, ಚಹರ್ 31 ರನ್ ಗಳಿಸಿ ನಿರ್ಗಮಿಸಿದರು. ಕಳೆದ ಪಂದ್ಯದ ಹೀರೋ ಸೂರ್ಯ ಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಕೂಡ ಬೇಗನೆ ವಿಕೆಟ್ ಒಪ್ಪಿಸಿದ್ದು ಭಾರತಕ್ಕೆ ಮುಳುವಾಯಿತು. ಅಂತಿಮವಾಗಿ ಭಾರತ ತಂಡ 18.3 ಓವರ್ ನಲ್ಲಿ  178 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಒಪ್ಪಿಸಿ 49ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ