ಭಾರತ vs ದಕ್ಷಿಣ ಆಫ್ರಿಕಾ 
ಕ್ರಿಕೆಟ್

ಮೊದಲ ಏಕದಿನ: ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟ, ಭಾರತಕ್ಕೆ 250ರನ್ ಗಳ ಬೃಹತ್ ಗುರಿ ನೀಡಿದ ದ.ಆಫ್ರಿಕಾ

ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾಗೆ ಗೆಲ್ಲಲು 250ರನ್ ಗಳ ಬೃಹತ್ ಗುರಿ ನೀಡಿದೆ.

ಲಖನೌ: ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾಗೆ ಗೆಲ್ಲಲು 250ರನ್ ಗಳ ಬೃಹತ್ ಗುರಿ ನೀಡಿದೆ.

ಆತಿಥೇಯ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನಿಗದಿತ 40 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು 249 ರನ್ ಗಳಿಸಿದೆ. ಆ ಮೂಲಕ ಭಾರತಕ್ಕೆ ಗೆಲ್ಲಲು 250ರನ್ ಗಳ ಗುರಿ ನೀಡಿದೆ. 

ಉತ್ತರ ಪ್ರದೇಶದ ಲಖನೌನ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ಶಿಖರ್‌ ಧವನ್‌ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮಳೆಯಿಂದಾಗಿ ಪಂದ್ಯವನ್ನು 40 ಓವರ್‌ಗೆ ಇಳಿಸಲಾಗಿತ್ತು. ಅದರಂತೆ ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ಪಡೆಗೆ ಜೇನ್ಮೆನ್ ಮಲಾನ್ (22) ಹಾಗೂ ಕ್ವಿಂಟನ್ ಡಿಕಾಕ್ (48) ಉತ್ತಮ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 49 ರನ್ ಜೊತೆಯಾಟ ನೀಡಿದರು.

ಮಲಾನ್ (22) ಔಟಾದ ಬಳಿಕ ಬಂದ ನಾಯಕ ತೆಂಬಾ ಬವುಮಾ (8) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಏಡನ್ ಮರ್ಕರಂ ಸಹ ಶೂನ್ಯ ಸುತ್ತಿ ನಿರಾಶೆ ಮೂಡಿಸಿದರು. ಈ ಹಂತದಲ್ಲಿ ಕ್ವಿಂಟನ್‌ಗೆ (48) ಜೊತೆಯಾದ ಹೆನ್ರಿಚ್‌ ಕ್ಲಾಸನ್‌ ವಿಕೆಟ್‌ ಬೀಳದಂತೆ ಎಚ್ಚರಿಕೆಯ ಆಟವಾಡಿದರು. ಕ್ವಿಂಟನ್‌ ಡಿ ಕಾಕ್ ವಿಕೆಟ್‌ ಪತನದ ನಂತರ ಬಂದ ಡೇವಿಡ್‌ ಮಿಲ್ಲರ್‌ ಆಫ್ರಿಕಾ ಇನಿಂಗ್ಸ್‌ಗೆ ಬಲ ತುಂಬಿದರು. ಕ್ಲಾಸನ್‌ ಜೊತೆಗೂಡಿ ಮುರಿಯದ ಐದನೇ ವಿಕೆಟ್‌ ಪಾಲುದಾರಿಕೆಯಲ್ಲಿ 139 ರನ್‌ ಸೇರಿದರು.

ಕ್ಲಾಸನ್‌ 65 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿ ಸಹಿತ 74 ರನ್ ಗಳಿಸಿದರೆ, ಮಿಲ್ಲರ್‌ 63 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 5 ಬೌಂಡರಿ ಸಹಿತ 75 ರನ್ ಸಿಡಿಸಿದರು.  ಭಾರತ ಪರ ಶಾರ್ದೂಲ್‌ ಠಾಕೂರ್‌ 2 ವಿಕೆಟ್‌ ಕಿತ್ತರು. ಸ್ಪಿನ್ನರ್‌ಗಳಾದ ಕುಲದೀಪ್‌ ಯಾದವ್‌ ಮತ್ತು ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT