ಕ್ರಿಕೆಟ್

ಭಾರತದ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ

Nagaraja AB

ರಾಂಚಿ: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಟೀಂ ಇಂಡಿಯಾವನ್ನು ಫೀಲ್ಡಿಂಗ್ ಗೆ ಆಹ್ವಾನಿಸಿದರು. ವಾಷಿಂಗ್ ಟನ್ ಸುಂದರ್ ಹಾಗೂ ಶಹಬಾಜ್ ಅಹ್ಮದ್ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಡಲಿದ್ದಾರೆ. 

ಲಖನೌನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 9 ರನ್ ಗಳಿಂದ ವಿರೋಚಿತ ಸೋತಿದ್ದರಿಂದ ಇಂದಿನ ಪಂದ್ಯ ಮಹತ್ವದ್ದಾಗಿದೆ.  ಟೀಂ ಇಂಡಿಯಾ ಫೀಲ್ಡಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿಸಬೇಕಾದ ಅಗತ್ಯ ಎದುರಾಗಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಇಂದಿನ ಪಂದ್ಯ ಗೆದ್ದು ಸಮಬಲ ಕಾಯ್ದುಕೊಳ್ಳಲುಟೀಂ ಇಂಡಿಯಾ ಸಿದ್ಧತೆ ನಡೆಸಿದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಪಂದ್ಯ ಗೆದ್ದು ಸರಣಿ ಕೈ ವಶ ಮಾಡಿಕೊಳ್ಳುವ ತವಕದಲ್ಲಿದೆ. 

ಟೀಂ ಇಂಡಿಯಾ ಇಂತಿದೆ: ಶಿಖರ್ ಧವನ್ (ನಾಯಕ) ಶುಭ್ ಮನ್ ಗಿಲ್, ಇಶಾನ್ ಕಿಶಾನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ನದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶನ್ ಖಾನ್

SCROLL FOR NEXT