ರೋಜರ್ ಬಿನ್ನಿ 
ಕ್ರಿಕೆಟ್

ಬಿಸಿಸಿಐ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ ಸಾಧ್ಯತೆ, ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ

1983ರ ವಿಶ್ವ ಕಪ್ ವಿಜೇತ ಟೀಂ ಇಂಡಿಯಾ ಹೀರೋ, ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ನವದೆಹಲಿ: 1983ರ ವಿಶ್ವ ಕಪ್ ವಿಜೇತ ಟೀಂ ಇಂಡಿಯಾ ಹೀರೋ, ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಅಧಿಕಾರವಧಿ ಅಕ್ಟೋಬರ್ 18 ರಂದು ಅಂತ್ಯಗೊಳ್ಳಲಿದೆ. ಕಳೆದ ಒಂದು ವಾರದಿಂದ ಹಲವು ಸುತ್ತಿನ ಚರ್ಚೆಯ ನಂತರ 67 ವರ್ಷದ ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ 36ನೇ ಅಧ್ಯಕ್ಷರಾಗಲು ನಿರ್ಧರಿಸಲಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ಮುಂದುವರೆಯಲಿದ್ದಾರೆ. ಐಸಿಸಿ ಮಂಡಳಿಯಲ್ಲಿ ಗಂಗೂಲಿ ಬದಲಿಗೆ ಜಯ್ ಶಾ ಭಾರತವನ್ನು ಪ್ರತಿನಿಧಿಸಲಿದ್ದಾರೆ.  ರಾಜೀವ್ ಶುಕ್ಲಾ ಉಪಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಸಹೋದರ ಅರುಣ್ ಸಿಂದ್ ಧುಮಲ್ ಇದೀಗ ಐಪಿಎಲ್ ಮುಖ್ಯಸ್ಥರಾಗಲಿದ್ದಾರೆ. ಬ್ರಿಜೇಶ್ ಪಾಟೇಲ್ ಜಾಗಕ್ಕೆ ಧುಮಲ್ ಬರಲಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಮುಖಂಡ ಅಶಿಶ್ ಶೆಲರ್ ನೂತನ ಖಜಾಂಚಿಯಾಗಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಆಪ್ತ ದೇವಜಿತ್ ಸೈಕಿಯಾ ನೂತನ ಜಂಟಿ ಕಾರ್ಯದರ್ಶಿಯಾಗಿದ್ದಾರೆ. 

ರೋಜರ್ ಬಿನ್ನಿ ಅಕ್ಟೋಬರ್ 18 ರಂದು ಮುಂಬೈನ ಎಜಿಎಂನಲ್ಲಿ ಅಧಿಕಾರ ವಹಿಸಿಕೊಳ್ಳುವರು. ಎಲ್ಲಾ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿರುವುದರಿಂದ ಯಾವುದೇ ಚುನಾವಣೆ ನಡೆಸುತ್ತಿಲ್ಲ. ಭಾರತ ತಂಡ 1983ರ ವಿಶ್ವಕಪ್ ಗೆಲ್ಲುವಲ್ಲಿ ರೋಜರ್ ಬಿನ್ನಿ ಪ್ರಮುಖ ಪಾತ್ರ ನಿರ್ವಹಿಸಿದರು. ಪ್ರತಿಷ್ಟಿತ ಟೂರ್ನಿಯಲ್ಲಿ ಮಧ್ಯಮ ವೇಗಿ ರೋಜರ್ ಬಿನ್ನಿ 8 ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದರು. 

ಐಪಿಎಲ್ ಮುಖ್ಯಸ್ಥ ಸ್ಥಾನ ತಿರಸ್ಕರಿಸಿದ ಗಂಗೂಲಿ: ಬಿಸಿಸಿಐ ಅಧ್ಯಕ್ಷರಾಗಿ ಎರಡನೇ ಅವಧಿಗೆ ಮುಂದುವರೆಯಲು ಗಂಗೂಲಿ ಬಯಸಿದ್ದರು. ಆದರೆ, ಅಂತಹ ಅವಕಾಶ ಇಲ್ಲ ಎಂಬುದನ್ನು ಅವರಿಗೆ ಹೇಳಲಾಯಿತು. ಐಪಿಎಲ್ ಮುಖ್ಯಸ್ಥ ಸ್ಥಾನದ ಅವಕಾಶವನ್ನು ಅವರು ನಿರಾಕರಿಸಿದರು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT