ದೇವದತ್ ಪಡಿಕ್ಕಲ್ 
ಕ್ರಿಕೆಟ್

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಭಾರೀ ಗೆಲುವಿನೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡ ಕರ್ನಾಟಕ

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕ ಅರುಣಾಚಲ ಪ್ರದೇಶ ವಿರುದ್ಧ 10 ವಿಕೆಟ್‌ಗಳ ಗೆಲುವು ಸಾಧಿಸಿ, ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. 

ಚೆನ್ನೈ: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕ ಅರುಣಾಚಲ ಪ್ರದೇಶ ವಿರುದ್ಧ 10 ವಿಕೆಟ್‌ಗಳ ಗೆಲುವು ಸಾಧಿಸಿ, ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ 75 ರನ್ ಗಳಿಗೆ ಆಲೌಟ್ ಆಯಿತು. ನಂತರ ಈ ಗುರಿ ಬೆನ್ನಟ್ಟಿದ್ದ ಕರ್ನಾಟಕ ಕೇವಲ 6.5 ಓವರ್ ಗಳಲ್ಲಿ  ಮಯಾಂಕ್ ಅಗರ್ವಾಲ್ 47, ದೇವದತ್ ಪಡಿಕ್ಕಲ್ 28 ರನ್ ಗಳೊಂದಿಗೆ ವಿಜಯದ ನಗೆ ಬೀರಿತು.

ಉಳಿದಂತೆ ತಮಿಳುನಾಡು ಮತ್ತು ಆಂಧ್ರ ಪ್ರದೇಶ ನಾಕೌಟ್ ಹಂತ ತಲುಪುವ ಭರವಸೆ ಹೊಂದಿವೆ. ಆದರೆ, ಮಹಾರಾಷ್ಟ್ರ ವಿರುದ್ಧ ಸೋತ ನಂತರ ಕೇರಳ ಭರವಸೆಯನ್ನು ಕಳೆದುಕೊಂಡಿತು. ಆಂಧ್ರ ಪ್ರದೇಶ ಎರಡು ವಿಕೆಟ್ ಗಳೊಂದಿಗೆ ಬಿಹಾರವನ್ನು ಸೋಲಿಸಿತು. ಕರಣ್ ಶಿಂಧೆ 38 ಎಸೆತಗಳಲ್ಲಿ 75 ರನ್ ಗಳಿಸುವ ಮೂಲಕ ಗೆಲುವಿನ ಹಾದಿ ಸುಗಮಗೊಳಿಸಿದರು.

ತಮಿಳುನಾಡು ಪರ ವಾಷಿಂಗ್ಟನ್ ಸುಂದರ್ , ವರುಣ್ ಚಕ್ರವರ್ತಿ ತಲಾ ಒಂದು, ಆರ್  ಸಾಯಿ ಕಿಶೋರ್ 3 ಮತ್ತು ಮುರುಗನ್ ಅಶ್ವಿನ್ 2 ವಿಕೆಟ್ ಕಬಳಿಸುವ ಮೂಲಕ ಜಾರ್ಖಂಡ್ ತಂಡವನ್ನು ಸೋಲಿಸಿದರು. ಭಾರತ ತಂಡದ ಕೀಪರ್ ಸಂಜು ಸ್ಯಾಮ್ಸನ್ ನಿರೀಕ್ಷೆಗೆ ತಕ್ಕಂತೆ ಆಡಲು ವಿಫಲವಾದ ಕಾರಣ ಕೇರಳ ಮಹಾರಾಷ್ಟ್ರ ವಿರುದ್ಧ 168 ರನ್ ಗಳ ಚೇಸಿಂಗ್‌ನಲ್ಲಿ ಸೋತಿತು.ಮಹಾರಾಷ್ಟ್ರ ಪರ ಭಾರತದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ಸ್ 114 ರನ್ ಗಳಿಸಿ ಮಿಂಚಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT