ಟೀಂ ಇಂಡಿಯಾ 
ಕ್ರಿಕೆಟ್

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ಟಿ-20 ವಿಶ್ವಕಪ್ ಪಂದ್ಯದ ಸೂಪರ್ ಲೀಗ್ ಹಣಾಹಣಿಯಲ್ಲಿ ನೆದರ್ ಲ್ಯಾಂಡ್ಸ್ ಎದುರಿಸಲಿಸಿರುವ ಭಾರತ ಮೊದಲಿಗೆ ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ಟಿ-20 ವಿಶ್ವಕಪ್ ಪಂದ್ಯದ ಸೂಪರ್ ಲೀಗ್ ಹಣಾಹಣಿಯಲ್ಲಿ ನೆದರ್ ಲ್ಯಾಂಡ್ಸ್ ಎದುರಿಸಲಿಸಿರುವ ಭಾರತ ಮೊದಲಿಗೆ ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪಾಕ್ ವಿರುದ್ಧ ಗೆದ್ದು ಆತ್ಮವಿಶ್ವಾಸ ಇಮ್ಮಡಿಪಡಿಸಿಕೊಂಡಿರುವ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸದಲ್ಲಿದೆ. ಟೀಂ ಇಂಡಿಯಾ ಫೀಲ್ಡಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಿಂದಿನ ಪಂದ್ಯದಲ್ಲಿದ್ದ ಎಲ್ಲಾ 11 ಆಟಗಾರರು ಇಂದಿನ ಪಂದ್ಯದಲ್ಲೂ ಆಡಲಿದ್ದಾರೆ.

 ಪಿಚ್ ಸ್ವಲ್ಪ ನಿಧಾನವಾಗಿರಲಿದೆ, ನಾವು ಈ ರೀತಿಯ ಟ್ರ್ಯಾಕ್‌ಗಳಲ್ಲಿ ಆಡುತ್ತೇವೆ ಎಂದು ರೋಹಿತ್ ಶರ್ಮಾ ಟಾಸ್ ಗೆದ್ದ ಬಳಿಕ ಹೇಳಿದರು. ಬಾಂಗ್ಲಾದೇಶ ವಿರುದ್ಧ ಹಿಂದಿನ ಪಂದ್ಯದಲ್ಲಿ ಸೋತಿದ್ದರೂ ನೆದರ್ಲೆಂಡ್ಸ್  ತಂಡದಲ್ಲೂ ಕೂಡ ಯಾವುದೇ ಆಟಗಾರರು ಬದಲಾಗಿಲ್ಲ.

ಭಾರತ ತಂಡ ಇಂತಿದೆ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ನೆದರ್ಲ್ಯಾಂಡ್ಸ್ ತಂಡ ಇಂತಿದೆ: ಸ್ಕಾಟ್ ಎಡ್ವರ್ಡ್ಸ್ (ನಾಯಕ, w/k), ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT