ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ಟಿ20 ವಿಶ್ವಕಪ್: ಪಾಕ್ ಗೆ ಮಾಡು ಇಲ್ಲವೇ ಮಡಿ ಪಂದ್ಯ: ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ!

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಿಂದ ಬಹುತೇಕ ಹೊರಬೀಳುವ ಅತಂಕದಲ್ಲಿರುವ ಪಾಕಿಸ್ತಾನ, ನೆದರ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯವನ್ನಾಡುತ್ತಿದೆ.

ಪರ್ತ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಿಂದ ಬಹುತೇಕ ಹೊರಬೀಳುವ ಅತಂಕದಲ್ಲಿರುವ ಪಾಕಿಸ್ತಾನ, ನೆದರ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯವನ್ನಾಡುತ್ತಿದೆ.

ಪರ್ತ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಮಹತ್ವವಾಗಿದೆ. ಎರಡೂ ತಂಡಗಳು ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿಲ್ಲ ಮತ್ತು ಪಾಯಿಂಟ್ ಪಟ್ಟಿಯಲ್ಲಿ ಅಂತಿಮ ಎರಡು ಸ್ಥಾನಗಳಲ್ಲಿ ಕುಳಿತಿವೆ. ತನ್ನ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿದ್ದ ಪಾಕಿಸ್ತಾನಕ್ಕೆ 2ನೇ ಪಂದ್ಯದಲ್ಲಿ ದುರ್ಬಲ ಜಿಂಬಾಬ್ವೆ ಶಾಕ್ ನೀಡಿತ್ತು. ಹೀಗಾಗಿ ಪಾಕಿಸ್ತಾನಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ತಂಡಗಳು ಇಂತಿವೆ:
ನೆದರ್ಲ್ಯಾಂಡ್: 

ಸ್ಟೀಫನ್ ಮೈಬರ್ಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್(ವಿಕೆಟ್ ಕೀಪರ್, ನಾಯಕ), ರೋಲೋಫ್ ವ್ಯಾನ್ ಡೆರ್ ಮೆರ್ವೆ, ಟಿಮ್ ಪ್ರಿಂಗಲ್, ಫ್ರೆಡ್ ಕ್ಲಾಸೆನ್, ಬ್ರಾಂಡನ್ ಗ್ಲೋವರ್, ಪಾಲ್ ವ್ಯಾನ್ ಮೀಕೆರೆನ್

ಪಾಕಿಸ್ತಾನ: 
ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಶಾನ್ ಮಸೂದ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT