ಸಂಗ್ರಹ ಚಿತ್ರ 
ಕ್ರಿಕೆಟ್

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಸೋಲು; ಪಾಕ್ ಕಣ್ಣಲ್ಲಿ ನೀರು!

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದ್ದು ಈ ಮೂಲಕ ಪಾಕಿಸ್ತಾನದ ಸೆಮಿಫೈನಲ್ ಕನಸು ಮತ್ತಷ್ಟು ಕಗ್ಗಂಟಾಗಿದೆ.

ಪರ್ತ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದ್ದು ಈ ಮೂಲಕ ಪಾಕಿಸ್ತಾನದ ಸೆಮಿಫೈನಲ್ ಕನಸು ಮತ್ತಷ್ಟು ಕಗ್ಗಂಟಾಗಿದೆ. 

ಪರ್ತ್ ನಲ್ಲಿ ನಡದೆ ಆಫ್ರಿಕಾ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಹರಣಿಗಳ ಬೌಲಿಂಗ್ ದಾಳಿಗೆ ತತ್ತರಿಸಿದ್ದು, ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಪೇರಿಸಿತ್ತು. ಭಾರತ ನೀಡಿದ ಅಲ್ಪಮೊತ್ತ ಗುರಿಯನ್ನು ಬೆನ್ನಟ್ಟಿದ ಆಫ್ರಿಕಾ ತಂಡ ಆರಂಭಿಕ ಹಿನ್ನಡೆ ಅನುಭವಿಸಿದರೂ ಮಾರ್ಕ್ರಾಮ್ ಮತ್ತು ಡೇವಿಡ್ ಮಿಲ್ಲರ್ ಉತ್ತಮ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. 

ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 9, ರೋಹಿತ್ ಶರ್ಮಾ 15, ವಿರಾಟ್ ಕೊಹ್ಲಿ 12 ಮತ್ತು ಸೂರ್ಯಕುಮಾರ್ ಯಾದವ್ 68 ರನ್ ಪೇರಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ ಡಿಕಾಕ್ 1, ಬವುಮಾ 10, ಮಾರ್ಕ್ರಾಮ್ 52, ಡೇವಿಡ್ ಮಿಲ್ಲರ್ ಅಜೇಯ 59 ರನ್ ಪೇರಿಸಿದ್ದಾರೆ. 

ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2ರಲ್ಲಿ 5 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ ಟೀಂ ಇಂಡಿಯಾ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು 2 ಅಂಕ ಗಳಿಸಿರುವ ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ. 

ಸೆಮಿಫೈನಲ್ ಪ್ರವೇಶಿಸಲು ಭಾರತಕ್ಕೂ ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ನಡುವೆ ಕ್ರಮವಾಗಿ ನವೆಂಬರ್ 2 ಮತ್ತು ನವೆಂಬರ್ 6ರಂದು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT