ಸಂಗ್ರಹ ಚಿತ್ರ 
ಕ್ರಿಕೆಟ್

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಸೋಲು; ಪಾಕ್ ಕಣ್ಣಲ್ಲಿ ನೀರು!

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದ್ದು ಈ ಮೂಲಕ ಪಾಕಿಸ್ತಾನದ ಸೆಮಿಫೈನಲ್ ಕನಸು ಮತ್ತಷ್ಟು ಕಗ್ಗಂಟಾಗಿದೆ.

ಪರ್ತ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದ್ದು ಈ ಮೂಲಕ ಪಾಕಿಸ್ತಾನದ ಸೆಮಿಫೈನಲ್ ಕನಸು ಮತ್ತಷ್ಟು ಕಗ್ಗಂಟಾಗಿದೆ. 

ಪರ್ತ್ ನಲ್ಲಿ ನಡದೆ ಆಫ್ರಿಕಾ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಹರಣಿಗಳ ಬೌಲಿಂಗ್ ದಾಳಿಗೆ ತತ್ತರಿಸಿದ್ದು, ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಪೇರಿಸಿತ್ತು. ಭಾರತ ನೀಡಿದ ಅಲ್ಪಮೊತ್ತ ಗುರಿಯನ್ನು ಬೆನ್ನಟ್ಟಿದ ಆಫ್ರಿಕಾ ತಂಡ ಆರಂಭಿಕ ಹಿನ್ನಡೆ ಅನುಭವಿಸಿದರೂ ಮಾರ್ಕ್ರಾಮ್ ಮತ್ತು ಡೇವಿಡ್ ಮಿಲ್ಲರ್ ಉತ್ತಮ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. 

ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 9, ರೋಹಿತ್ ಶರ್ಮಾ 15, ವಿರಾಟ್ ಕೊಹ್ಲಿ 12 ಮತ್ತು ಸೂರ್ಯಕುಮಾರ್ ಯಾದವ್ 68 ರನ್ ಪೇರಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ ಡಿಕಾಕ್ 1, ಬವುಮಾ 10, ಮಾರ್ಕ್ರಾಮ್ 52, ಡೇವಿಡ್ ಮಿಲ್ಲರ್ ಅಜೇಯ 59 ರನ್ ಪೇರಿಸಿದ್ದಾರೆ. 

ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2ರಲ್ಲಿ 5 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ ಟೀಂ ಇಂಡಿಯಾ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು 2 ಅಂಕ ಗಳಿಸಿರುವ ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ. 

ಸೆಮಿಫೈನಲ್ ಪ್ರವೇಶಿಸಲು ಭಾರತಕ್ಕೂ ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ನಡುವೆ ಕ್ರಮವಾಗಿ ನವೆಂಬರ್ 2 ಮತ್ತು ನವೆಂಬರ್ 6ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT