ರವೀಂದ್ರ ಜಡೇಜಾ 
ಕ್ರಿಕೆಟ್

ಏಷ್ಯಾಕಪ್‌ 2022: ಗಾಯದ ಸಮಸ್ಯೆಯಿಂದ 'ಜಡೇಜಾ' ಟೂರ್ನಿಯಿಂದಲೇ ಔಟ್, ರಿಪ್ಲೇಸ್ ಯಾರು ಗೊತ್ತಾ?

ಏಷ್ಯಾಕಪ್ 2022 ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ನವದೆಹಲಿ: ಏಷ್ಯಾಕಪ್ 2022 ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಮೊಣಕಾಲಿನ ಗಾಯದ ಸಮಸ್ಯೆಗೆ ತುತ್ತಾಗಿದ್ದ ರವೀಂದ್ರ ಜಡೇಜಾರ ವೈದ್ಯಕೀಯ ಪರೀಕ್ಷೆಗಳ ಬಳಿಕ ವೈದ್ಯರು ಕಡ್ಡಾಯ ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಜಡೇಜಾರನ್ನು ಹಾಲಿ ಏಷ್ಯಾಕಪ್ ಟೂರ್ನಿಯಿಂದಲೇ ಕೈ ಬಿಡಲಾಗಿದೆ. ಜಡೇಜಾ ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಅಂತೆಯೇ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಅವರ ಬದಲಿ ಆಟಗಾರನಾಗಿ ಅಕ್ಷರ್ ಪಟೇಲ್ ಅವರನ್ನು ಹೆಸರಿಸಿದೆ.

ಇನ್ನು ಹಾಲಿ ಏಷ್ಯಾಕಪ್ ಟೂರ್ನಿಯಲ್ಲಿ ಭರ್ಜರಿ ಫಾರ್ಮ್ ನಲ್ಲಿದ್ದ ಜಡೇಜಾ ಪಾಕಿಸ್ತಾನದ ವಿರುದ್ಧ 35 ರನ್ ಮತ್ತು ಹಾಂಗ್ ಕಾಂಗ್ ವಿರುದ್ಧದ 2ನೇ ಪಂದ್ಯದಲ್ಲಿ ಬೌಲಿಂಗ್ ನಲ್ಲಿ 1 ವಿಕೆಟ್ ಪಡೆದು ಉತ್ತಮ ಪ್ರದರ್ಶನ ತೋರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT