ರವೀಂದ್ರ ಜಡೇಜಾ 
ಕ್ರಿಕೆಟ್

ರವೀಂದ್ರ ಜಡೇಜಾಗೆ ಗಾಯದ ಸಮಸ್ಯೆ: ಟಿ-20 ವಿಶ್ವಕಪ್ ನಿಂದ ಹೊರಗೆ

ಟೀಂ ಇಂಡಿಯಾ ಹಿರಿಯ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನಿಂದ ಹೊರಗುಳಿಯಲಿದ್ದಾರೆ

ನವದೆಹಲಿ: ಟೀಂ ಇಂಡಿಯಾ ಹಿರಿಯ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನಿಂದ ಹೊರಗುಳಿಯಲಿದ್ದಾರೆ. ರವೀಂದ್ರ ಜಡೇಜಾ ಮೊಣಕಾಲಿನ ಗಾಯದ ಸಮಸ್ಯೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ, ಇದರಿಂದಾಗಿ ಅವರು ಅನಿರ್ದಿಷ್ಟ ಅವಧಿಯವರೆಗೆ ಕ್ರಿಕೆಟ್ ಪಂದ್ಯದಿಂದ ದೂರವಿರುವ ಸಾಧ್ಯತೆಯಿದೆ.

ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಹಾಗೂ ಹಾಂಕ್ ಹಾಂಗ್ ವಿರುದ್ಧ ಎರಡು ಪಂದ್ಯಗಳನ್ನಾಡಿದ್ದ ರವೀಂದ್ರ ಜಡೇಜಾ, ತನ್ನ ಆಲ್ ರೌಂಡ್ ಸಾಮರ್ಥ್ಯದಿಂದ ತಂಡಕ್ಕೆ ಅಗತ್ಯ ಸಮತೋಲನ ನೀಡುತ್ತಿದ್ದರು. ಆದರೆ, ಮುಂದಿನ ಪಂದ್ಯಗಳಲ್ಲಿ ಅವರ ಅನುಪಸ್ಥಿತಿ ಭಾರತ ತಂಡದ ಮೇಲೆ ಪರಿಣಾಮ ಬೀರಲಿದೆ.

 ಜಡೇಜಾ ಅವರ ಬಲ ಮೊಣಕಾಲಿನ ಗಾಯ ಬಹಳ ಗಂಭೀರವಾಗಿದೆ. ಅವರು  ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಿದ್ದು, ಅನಿರ್ದಿಷ್ಟ ಅವಧಿಯವರೆಗೆ ಕ್ರಿಕೆಟ್ ಪಂದ್ಯ ಆಡಲ್ಲ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ರವೀಂದ್ರ ಜಡೇಜಾ ಚೇತರಿಸಿಕೊಳ್ಳಲು ಆರು ತಿಂಗಳು ತೆಗೆದುಕೊಳ್ಳಬಹುದು. ಆದರೆ, ಕನಿಷ್ಠ ಮೂರು ತಿಂಗಳ ಕಾಲ ಕ್ರಿಕೆಟ್ ಆಟದಿಂದ ಹೊರಗುಳಿಯುವುದು ಖಚಿತ ಎನ್ನಲಾಗಿದೆ. ಜಡೇಜಾ ಅವರ ಮೊಣಕಾಲಿನ ಸಮಸ್ಯೆ ಬಹಳ ಸಮಯದಿಂದ ಇದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT