ತಾನಿಯಾ ಭಾಟಿಯಾ 
ಕ್ರಿಕೆಟ್

ಭಾರತದ ಕ್ರಿಕೆಟ್ ಆಟಗಾರ್ತಿ ತಾನಿಯಾ ಭಾಟಿಯಾ ತಂಗಿದ್ದ ಲಂಡನ್‌ನ ಹೋಟೆಲ್‌ನಲ್ಲಿ ಕಳ್ಳತನ: ನಗದು, ಚಿನ್ನಾಭರಣ ಕಳವು!

ಲಂಡನ್‌ನ ಮ್ಯಾರಿಯಟ್ ಹೋಟೆಲ್‌ನಲ್ಲಿ ಮಹಿಳಾ ತಂಡ ತಂಗಿದ್ದ ವೇಳೆ ನಗದು, ಕಾರ್ಡ್‌ಗಳು ಮತ್ತು ಆಭರಣಗಳು ಸೇರಿದಂತೆ ಅವರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ತಾನಿಯಾ ಭಾಟಿಯಾ ಸೋಮವಾರ ಹೇಳಿದ್ದಾರೆ.

ನವದೆಹಲಿ: ಲಂಡನ್‌ನ ಮ್ಯಾರಿಯಟ್ ಹೋಟೆಲ್‌ನಲ್ಲಿ ಮಹಿಳಾ ತಂಡ ತಂಗಿದ್ದ ವೇಳೆ ನಗದು, ಕಾರ್ಡ್‌ಗಳು ಮತ್ತು ಆಭರಣಗಳು ಸೇರಿದಂತೆ ಅವರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ತಾನಿಯಾ ಭಾಟಿಯಾ ಸೋಮವಾರ ಹೇಳಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ಸರಣಿಯಲ್ಲಿ 3-0 ಅಂತರದ ಭರ್ಜರಿ ಜಯ ದಾಖಲಿಸಿದೆ. ಸರಣಿಯ ಕೊನೆಯ ಪಂದ್ಯ ಶನಿವಾರ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲವು ದಾಖಲಿಸಿತ್ತು.

ತಾನಿಯಾ ಕಳ್ಳತನದ ಬಗ್ಗೆ ಟ್ವಿಟರ್‌ ಮಾಡಿದ್ದು ಮ್ಯಾರಿಯಟ್ ಹೋಟೆಲ್ ಲಂಡನ್ ಮೈದಾ ವೇಲ್ ಆಡಳಿತದಿಂದ ಆಘಾತ ಮತ್ತು ನಿರಾಶೆಯಾಗಿದೆ. ನಾನು ಇತ್ತೀಚೆಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯಾಗಿದ್ದಾಗ ಯಾರೋ ನನ್ನ ಕೋಣೆಗೆ ನುಗ್ಗಿ ನಗದು, ಕಾರ್ಡ್‌ಗಳು, ಕೈಗಡಿಯಾರ ಮತ್ತು ಆಭರಣಗಳ ಜೊತೆಗೆ ನನ್ನ ಬ್ಯಾಗನ್ನು ಕದ್ದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ(ಇಸಿಬಿ) ಟ್ವಿಟರ್ ಹ್ಯಾಂಡಲ್ ಗೆ ಟ್ಯಾಗ್ ಮಾಡಿ ಮತ್ತೊಂದು ಟ್ವೀಟ್‌ ಮಾಡಿರುವ ಅವರು, ಈ ವಿಷಯದ ತ್ವರಿತ ತನಿಖೆ ಮತ್ತು ಪರಿಹಾರಕ್ಕಾಗಿ ಆಶಿಸುತ್ತೇನೆ. ಇಸಿಬಿಯ ಆದ್ಯತೆಯ ಹೋಟೆಲ್ ಪಾಲುದಾರರಲ್ಲಿ ಭದ್ರತೆಯ ಕೊರತೆಯು ಆಶ್ಚರ್ಯಕರವಾಗಿದೆ. ಅವರು ಸಹ ಗಮನಹರಿಸುತ್ತಾರೆ ಎಂದು ಭಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

24 ವರ್ಷದ ಆಟಗಾರ್ತಿಯ ದೂರಿಗೆ ಟ್ವೀಟ್ ಮೂಲಕ ಸ್ಪಂಧಿಸಿರುವ ಹೋಟೆಲ್ ಆಡಳಿತ ಮಂಡಳಿ, ನಾವು ಇದಕ್ಕೆ ವಿಷಾದಿಸುತ್ತೇವೆ. ದಯವಿಟ್ಟು ನಿಮ್ಮ ಹೆಸರು ಮತ್ತು ಇಮೇಲ್ ವಿಳಾಸದ ಹೊರತಾಗಿ ನಿಮ್ಮ ಕಾಯ್ದಿರಿಸುವಿಕೆಯ ವಿವರಗಳನ್ನು ಹಂಚಿಕೊಳ್ಳಿ, ಇದರಿಂದ ನಾವು ಅದನ್ನು ಪರಿಶೀಲಿಸಬಹುದು ಎಂದು ಹೇಳಿದೆ.

ಭಾರತವು ಸೆಪ್ಟೆಂಬರ್ 10 ರಿಂದ 24 ರವರೆಗೆ ಇಂಗ್ಲೆಂಡ್‌ನಲ್ಲಿ ಮೂರು T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಮತ್ತು ಏಕದಿನ ಸರಣಿ ಆಡಿದ್ದು ತಾನಿಯಾ ಭಾರತ ಮಹಿಳಾ ಏಕದಿನ ತಂಡದ ಭಾಗವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT