ಐಪಿಎಲ್ ಪಂದ್ಯ ವೀಕ್ಷಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. 
ಕ್ರಿಕೆಟ್

ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ಆರ್‌ಸಿಬಿಗೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಎಲ್ಲಾ ರಾಜಕೀಯ ನಾಯಕರು ಬಿಡುವಿಲ್ಲದ ಕಸರತ್ತಿನಲ್ಲಿ ತೊಡಿಗಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. 

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಎಲ್ಲಾ ರಾಜಕೀಯ ನಾಯಕರು ಬಿಡುವಿಲ್ಲದ ಕಸರತ್ತಿನಲ್ಲಿ ತೊಡಿಗಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. 

ಕಟ್ಟಾ ಕ್ರಿಕೆಟ್ ಅಭಿಮಾನಿಯಾಗಿರುವ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕೆ ವಿರಾಮ ನೀಡಿ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ನೋಡಿ ಆನಂದಿಸಿದರು. ಕಾಂಗ್ರೆಸ್ ನಾಯಕ ತಾನು ಆರ್‌ಸಿಬಿ ಅಭಿಮಾನಿ ಎಂದು ಹೇಳಿದ್ದು, ಆರ್‌ಸಿಬಿ ಪಂದ್ಯ ಗೆದ್ದ ನಂತರ ಸಂತಸ ವ್ಯಕ್ತಪಡಿಸಿದ್ದಾರೆ. 

ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್‌ಸಿಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪಂದ್ಯ ವೀಕ್ಷಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪ್ರಮುಖ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸಲು ಸಿದ್ದರಾಮಯ್ಯ ಅವರು ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದರು.

ಸಿದ್ದರಾಮಯ್ಯ ಅವರ ಜೊತೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಪಂದ್ಯ ವೀಕ್ಷಣೆ ಮಾಡಿದರು. 

16ನೇ ಆವೃತ್ತಿಯ ಐಪಿಎಲ್‌ ಆರಂಭಗೊಂಡಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಕಾದಾಟ ನಡೆಯಿತು. ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT