ಪ್ರತ್ಯಕ್ಷ ದೃಶ್ಯ 
ಕ್ರಿಕೆಟ್

ಸೌರವ್ ಗಂಗೂಲಿ ವಿರಾಟ್ ಕೊಹ್ಲಿಗೆ 'ಕೈ'ಕೊಡಲು ನಿರಾಕರಿಸಿದ್ರಾ? ವಿಡಿಯೋ ನೋಡಿ!

ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅರ್ಧಶತಕವನ್ನು ಆಕ್ರಮಣಕಾರಿಯಾಗಿ ಆಚರಿಸಿದ ನಂತರ ಮಾಜಿ ಬಿಸಿಸಿಐ ಅಧ್ಯಕ್ಷರು ಕೈಕುಲುಕಲು ನಿರಾಕರಿಸಿದ್ದರೂ ಎಂದು ವರದಿಯಾಗುತ್ತಿದೆ.

ಬೆಂಗಳೂರು: ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅರ್ಧಶತಕವನ್ನು ಆಕ್ರಮಣಕಾರಿಯಾಗಿ ಆಚರಿಸಿದ ನಂತರ ಮಾಜಿ ಬಿಸಿಸಿಐ ಅಧ್ಯಕ್ಷರು ಕೈಕುಲುಕಲು ನಿರಾಕರಿಸಿದ್ದರೂ ಎಂದು ವರದಿಯಾಗುತ್ತಿದೆ. 

ಡೆಲ್ಲಿ ಕ್ಯಾಪಿಟಲ್ಸ್ ಸತತ 5ನೇ ಸೋಲನ್ನು ಅನುಭವಿಸಿದ ಕಾರಣ ಗಂಗೂಲಿ ಹತಾಶೆಯಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್‌ಗಳ ಜಯ ಸಾಧಿಸಿತ್ತು. ಇನ್ನು ವಿರಾಟ್ ಕೊಹ್ಲಿ 47ನೇ ಐಪಿಎಲ್ ಅರ್ಧಶತಕದ ಸಂಭ್ರಮಾಚರಣೆ ಡೆಲ್ಲಿ ಕ್ಯಾಪಿಟಲ್ಸ್ ಗೆ ಗಾಯಗಳಿಗೆ ಉಪ್ಪು ಸವರಿದಂತಾಗಿತ್ತು.

ಆರ್ ಸಿಬಿ ನೀಡಿ 175 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇತ್ತು. ಡೆಲ್ಲಿ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದ ಗಂಗೂಲಿಯನ್ನು ಬೌಂಡರಿ ಗೆರೆಯ ಬಳಿಯಿದ್ದ ವಿರಾಟ್ ಕೊಹ್ಲಿ ನೋಡಿದರು. ಇದು ಸಹ ಗಂಗೂಲಿಯ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಆರ್ ಸಿಬಿ ಪಂದ್ಯ ಗೆದ್ದ ನಂತರ ಉಭಯ ತಂಡಗಳ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳು ಕ್ರೀಡಾಸ್ಫೂರ್ತಿ ತೋರಲು ಹಸ್ತಲಾಘವ ಮಾಡಿದರು. ಆದರೆ, ಈ ವೇಳೆ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಕೈಕುಲುಕದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಟಗಾರರನ್ನು ಭೇಟಿ ಮಾಡಲು ಗಂಗೂಲಿ ಸರದಿ ಸಾಲಿನಲ್ಲಿ ಮುಂದೆ ಹೋಗುತ್ತಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರೊಂದಿಗೆ ಸಂಭಾಷಣೆಯಲ್ಲಿ ತೊಡಗಿದ್ದರು. ಈ ವೇಳೆ ಗಂಗೂಲಿ ವಿರಾಟ್ ಕೊಹ್ಲಿಯನ್ನು ಬಿಟ್ಟು ಮುಂದೆ ಹೋಗಿ ಇತರೆ ಆಟಗಾರರೊಂದಿಗೆ ಶೇಕ್ ಹ್ಯಾಂಡ್ ಮಾಡಿದರು. ಇದೀಗ ಈ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕೆಲವು ಅಭಿಮಾನಿಗಳು ಕೊಹ್ಲಿ ಉದ್ದೇಶಪೂರ್ವಕವಾಗಿ ಗಂಗೂಲಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಕ್ರಿಯಿಸಿದರೆ, ಇನ್ನು ಕೆಲವರು ಕೊಹ್ಲಿ ಪಾಂಟಿಂಗ್ ಅವರೊಂದಿಗೆ ಮಾಡನಾಡುತ್ತಿದ್ದರಿಂದ ಕಾಕತಾಳೀಯವಾಗಿ ಮಿಸ್ ಆಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT