ಪ್ರತ್ಯಕ್ಷ ದೃಶ್ಯ 
ಕ್ರಿಕೆಟ್

ಸೌರವ್ ಗಂಗೂಲಿ ವಿರಾಟ್ ಕೊಹ್ಲಿಗೆ 'ಕೈ'ಕೊಡಲು ನಿರಾಕರಿಸಿದ್ರಾ? ವಿಡಿಯೋ ನೋಡಿ!

ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅರ್ಧಶತಕವನ್ನು ಆಕ್ರಮಣಕಾರಿಯಾಗಿ ಆಚರಿಸಿದ ನಂತರ ಮಾಜಿ ಬಿಸಿಸಿಐ ಅಧ್ಯಕ್ಷರು ಕೈಕುಲುಕಲು ನಿರಾಕರಿಸಿದ್ದರೂ ಎಂದು ವರದಿಯಾಗುತ್ತಿದೆ.

ಬೆಂಗಳೂರು: ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅರ್ಧಶತಕವನ್ನು ಆಕ್ರಮಣಕಾರಿಯಾಗಿ ಆಚರಿಸಿದ ನಂತರ ಮಾಜಿ ಬಿಸಿಸಿಐ ಅಧ್ಯಕ್ಷರು ಕೈಕುಲುಕಲು ನಿರಾಕರಿಸಿದ್ದರೂ ಎಂದು ವರದಿಯಾಗುತ್ತಿದೆ. 

ಡೆಲ್ಲಿ ಕ್ಯಾಪಿಟಲ್ಸ್ ಸತತ 5ನೇ ಸೋಲನ್ನು ಅನುಭವಿಸಿದ ಕಾರಣ ಗಂಗೂಲಿ ಹತಾಶೆಯಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್‌ಗಳ ಜಯ ಸಾಧಿಸಿತ್ತು. ಇನ್ನು ವಿರಾಟ್ ಕೊಹ್ಲಿ 47ನೇ ಐಪಿಎಲ್ ಅರ್ಧಶತಕದ ಸಂಭ್ರಮಾಚರಣೆ ಡೆಲ್ಲಿ ಕ್ಯಾಪಿಟಲ್ಸ್ ಗೆ ಗಾಯಗಳಿಗೆ ಉಪ್ಪು ಸವರಿದಂತಾಗಿತ್ತು.

ಆರ್ ಸಿಬಿ ನೀಡಿ 175 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇತ್ತು. ಡೆಲ್ಲಿ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದ ಗಂಗೂಲಿಯನ್ನು ಬೌಂಡರಿ ಗೆರೆಯ ಬಳಿಯಿದ್ದ ವಿರಾಟ್ ಕೊಹ್ಲಿ ನೋಡಿದರು. ಇದು ಸಹ ಗಂಗೂಲಿಯ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಆರ್ ಸಿಬಿ ಪಂದ್ಯ ಗೆದ್ದ ನಂತರ ಉಭಯ ತಂಡಗಳ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳು ಕ್ರೀಡಾಸ್ಫೂರ್ತಿ ತೋರಲು ಹಸ್ತಲಾಘವ ಮಾಡಿದರು. ಆದರೆ, ಈ ವೇಳೆ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಕೈಕುಲುಕದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಟಗಾರರನ್ನು ಭೇಟಿ ಮಾಡಲು ಗಂಗೂಲಿ ಸರದಿ ಸಾಲಿನಲ್ಲಿ ಮುಂದೆ ಹೋಗುತ್ತಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರೊಂದಿಗೆ ಸಂಭಾಷಣೆಯಲ್ಲಿ ತೊಡಗಿದ್ದರು. ಈ ವೇಳೆ ಗಂಗೂಲಿ ವಿರಾಟ್ ಕೊಹ್ಲಿಯನ್ನು ಬಿಟ್ಟು ಮುಂದೆ ಹೋಗಿ ಇತರೆ ಆಟಗಾರರೊಂದಿಗೆ ಶೇಕ್ ಹ್ಯಾಂಡ್ ಮಾಡಿದರು. ಇದೀಗ ಈ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕೆಲವು ಅಭಿಮಾನಿಗಳು ಕೊಹ್ಲಿ ಉದ್ದೇಶಪೂರ್ವಕವಾಗಿ ಗಂಗೂಲಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಕ್ರಿಯಿಸಿದರೆ, ಇನ್ನು ಕೆಲವರು ಕೊಹ್ಲಿ ಪಾಂಟಿಂಗ್ ಅವರೊಂದಿಗೆ ಮಾಡನಾಡುತ್ತಿದ್ದರಿಂದ ಕಾಕತಾಳೀಯವಾಗಿ ಮಿಸ್ ಆಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT