ಸಿಎಸ್ ಕೆ ಆಟಗಾರರು 
ಕ್ರಿಕೆಟ್

ಐಪಿಎಲ್ 2023: ಆರ್ ಸಿಬಿ ವಿರುದ್ಧ ಚೆನ್ನೈಗೆ 8 ರನ್ ಗಳ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್, ಡೆವೊನ್ ಕಾನ್ವೆ(83) ಮತ್ತು ಶಿವಂ ದುಬೆ(52) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್​ನಲ್ಲಿ 6 ವಿಕೆಟ್​ ನಷ್ಟಕ್ಕೆ 226 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ಗೆಲುವಿಗೆ 227 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಆರ್ ಸಿಬಿ, ನಾಯಕ ಫಾಪ್ ಮತ್ತು ಮ್ಯಾಕ್ಸ್ ವೆಲ್ ಅವರ ಭರ್ಜರಿ ಪ್ರದರ್ಶನದ ಹೊರತಾಗಿಯೂ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್‌ ಗಳಿಸಲಷ್ಟೇ ಶಕ್ತವಾಯ್ತು. ಆ ಮೂಲಕ ಕೇವಲ 8 ರನ್‌ಗಳಿಂದ ಸಿಎಸ್‌ಕೆ ರೋಚಕ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರು ಸ್ಥಾನ ಮೇಲೆಕ್ಕೇರಿದೆ. 

ಚೆನ್ನೈ ಪರ ತುಷಾರ್​ ದೇಶಪಾಂಡೆ ನಾಲ್ಕು ಓವರ್​ ಮಾಡಿ 45 ರನ್ ನೀಡಿ ಪ್ರಮುಖ ಮೂರು ವಿಕೆಟ್​ ಪಡೆದು ಮಿಂಚಿದರು. ಉಳದಂತೆ ಆಕಾಶ್​ ಸಿಂಗ್​ 1 ವಿಕೆಟ್​, ಮಹೀಶಾ ತೀಕ್ಷಣ್​ 1 ವಿಕೆಟ್​, ಮತೇಶಾ ಪ್ರತಿರಣ್​ 2 ವಿಕೆಟ್​ ಮತ್ತು ಮೋಯಿನ್​ ಅಲಿ 1 ವಿಕೆಟ್​ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT