ಡೆಲ್ಲಿ ಕ್ಯಾಪಿಟಲ್ಸ್ ತಂಡ 
ಕ್ರಿಕೆಟ್

ಐಪಿಎಲ್ 2023: ಪಾರ್ಟಿ ವೇಳೆ ಆಟಗಾರನಿಂದ ಮಹಿಳೆ ಜೊತೆ ಅಸಭ್ಯ ವರ್ತನೆ: ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿದ ದೆಹಲಿ ತಂಡ

ಪಂದ್ಯ ಮುಕ್ತಾಯದ ಬಳಿಕ ನಡೆದ ಪಾರ್ಟಿ ವೇಳೆ ಆಟಗಾರನೋರ್ವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಆಟಗಾರರು ಮತ್ತು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.

ನವದೆಹಲಿ: ಪಂದ್ಯ ಮುಕ್ತಾಯದ ಬಳಿಕ ನಡೆದ ಪಾರ್ಟಿ ವೇಳೆ ಆಟಗಾರನೋರ್ವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಆಟಗಾರರು ಮತ್ತು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.

ಹೌದು.. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಆಟಗಾರರಿಗೆ ಕಟ್ಟುನಿಟ್ಟಾದ ನೀತಿ ಸಂಹಿತೆ ಮಾರ್ಗಸೂಚಿಗಳನ್ನು ತಂದಿದ್ದು, ಫ್ರಾಂಚೈಸಿಯ ಕ್ರಿಕೆಟಿಗನೊಬ್ಬ ಪಾರ್ಟಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಮೂಲಗಳ ಪ್ರಕಾರ ಸೋಮವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಿದ ನಂತರ ನೀತಿ ಸಂಹಿತೆ ಜಾರಿಯಾಗಿದೆ. ಕೆಲ ದಿನಗಳ ಹಿಂದೆ ನಡೆದ ಪಾರ್ಟಿ ವೇಳೆ ತಂಡದ ಆಟಗಾರನೋರ್ವ ಪಾರ್ಟಿಯಲ್ಲಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫ್ರಾಂಚೈಸಿ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿ ಮಾಡಿದೆ. ಆದರೆ ನೀತಿ ಸಂಹಿತೆಯಲ್ಲಿ ಘಟನೆಯ ವಿವರವಾಗಲೀ ಅಥವಾ ಅದರ ಉಲ್ಲೇಖವಾಗಲೀ ಇಲ್ಲ.

ಯಾವುದೇ ರೀತಿಯ ಉಲ್ಲಂಘನೆಗಾಗಿ ದಂಡಗಳು ಮತ್ತು ಒಪ್ಪಂದಗಳ ಮುಕ್ತಾಯವು ಶಿಕ್ಷೆಯಾಗಿದೆ ಎಂದು ತಂಡ ಬಿಡುಗಡೆ ಮಾಡಿರುವ ನೀತಿ ಸಂಹಿತೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ತಂಡದ ವರ್ಚಸ್ಸು ಕಾಪಾಡಲು ಫ್ರಾಂಚೈಸಿ ಮಾಲೀಕರು ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. 

ಪ್ರಸ್ತುತ, ಡಿಸಿ (ಡೆಲ್ಲಿ ಕ್ಯಾಪಿಟಲ್ಸ್) ಐಪಿಎಲ್ 2023 ಅಂಕಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಅವರು ಏಳು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಐದು ಸೋಲಿನ ನಂತರ ಒಟ್ಟು ನಾಲ್ಕು ಅಂಕಗಳನ್ನು ಹೊಂದಿದ್ದಾರೆ. ಡೆಲ್ಲಿ ತಂಡ ಮತ್ತೆ ಏಪ್ರಿಲ್ 29 ರಂದು ದೆಹಲಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT