ವಿಂಡೀಸ್ ವಿರುದ್ಧ ಗೆದ್ದ ಭಾರತ 
ಕ್ರಿಕೆಟ್

3ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದೆ.

ಗಯಾನಾ: ಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದೆ.

ಗಯಾನದ ಪ್ರಾವಿಡೆನ್ಸ್‌ ಮೈದಾನದಲ್ಲಿ ನಡೆದ ಮೂರನೇ ಟ್ವೆಂಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 160 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ಸೂರ್ಯ ಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 7 ವಿಕೆಟ್ ಗಳ ಅಂತರದಲ್ಲಿ ವಿಂಡೀಸ್ ತಂಡವನ್ನು ಮಣಿಸಿದೆ. ಆ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-2 ಅಂತರದಲ್ಲಿದ್ದು ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ.

ಇಂದು ನಡೆದ ಪಂದ್ಯದಲ್ಲಿ ಆರಂಭಿಕ ಆಘಾತದ ಹೊರತಾಗಿಯೂ ಟೀಂ ಇಂಡಿಯಾದ ಮಿ.360 ಖ್ಯಾತಿಯ ಆಟಗಾರ ಸೂರ್ಯ ಕುಮಾರ್ ಯಾದವ್ ಕೇವಲ 44 ಎಸೆತಗಳಲ್ಲಿ 10 ಬೌಂಡರಿ, 4 ಸಿಕ್ಸರ್ ಗಳ ನೆರವಿನಿಂದ 83 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ತಿಲಕ್ ವರ್ಮಾ ಕೂಡ 37 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ನೆರವಿನಿಂದ ಅಜೇಯ 49 ರನ್ ಸಿಡಿಸಿದರು. ಅಂತಿಮವಾಗಿ ನಾಯಕ ಹಾರ್ದಿಕ್ ಪಾಂಡ್ಯಾ 15 ಎಸೆತಗಳಲ್ಲಿ 20 ರನ್ ಸಿಡಿಸಿ ಗೆಲುವಿನ ಔಪಚಾರಿಕತೆ ಪೂರ್ಣಗೊಳಿಸಿದರು.

ಪದಾರ್ಪಣೆ ಪಂದ್ಯದಲ್ಲಿ ಜೈಸ್ವಾಲ್ ವಿಫಲ
ಇನ್ನು ಇಂದು ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಕಾಲಿಟ್ಟ ಐಪಿಎಲ್ ಸ್ಟಾರ್ ಯಶಸ್ವಿ ಜೈಸ್ವಾಲ್ ಪದಾರ್ಪಣೆ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದರು. ಕೇವಲ 2 ಎಸೆತಗಳನ್ನು ಎದುರುಸಿದ ಜೈಸ್ವಾಲ್ 1 ರನ್ ಗಳಿಸಿ ಒಬೆಡ್ ಮೆಕೋಯ್ ಗೆ ವಿಕೆಟ್ ಒಪ್ಪಿಸಿದರು. ಶುಭ್ ಮನ್ ಗಿಲ್ ಕೂಡ 11 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ಜೋಸೆಫ್ ಗೆ ವಿಕೆಟ್ ಒಪ್ಪಿಸಿದರು. 

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತದ ಕುಲದೀಪ್ ಯಾದವ್ ಮಾರಕವಾಗಿ ಪರಿಣಮಿಸಿದ್ದರು. ಆರಂಭಿಕ ಯಶಸ್ಸಿನ ಹೊರತಾಗಿಯೂ ವಿಂಡೀಸ್ ಪಡೆ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ವಿಂಡೀಸ್ ನ ಆರಂಭಿಕರಾದ ಬ್ರಾಂಡನ್ ಕಿಂಗ್ 42 ರನ್ ಗಳಿಸಿದರೆ, ಮೇಯರ್ಸ್ 25ರನ್ ಗಳಿಸಿದ್ದರು. ನಾಯಕ ಪೋವೆಲ್ ಕೂಡ 40ರನ್ ಗಳಿಸಿದರಾದರೂ ಮಧ್ಯಮ ಕ್ರಮಾಂಕದ ಕುಸಿತ ತಂಡದ ಬೃಹತ್ ಮೊತ್ತಕ್ಕೆ ಅಡ್ಡಿಯಾಯಿತು. ಭಾರತದ ಪರ ಕುಲದೀಪ್ ಯಾದವ್ 3 ವಿಕೆಟ್ ಪಡೆದರೆ, ಅಕ್ಸರ್ ಪಟೇಲ್ ಮತ್ತು ಮುಖೇಶ್ ಕುಮಾರ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT