ಬಿಸಿಸಿಐ 
ಕ್ರಿಕೆಟ್

ಕಳೆದ 5 ವರ್ಷಗಳಲ್ಲಿ ಬಿಸಿಸಿಐ 4,298 ಕೋಟಿ ರೂ. ಆದಾಯ ತೆರಿಗೆ ಪಾವತಿಸಿದೆ: ಕೇಂದ್ರ

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದರೆ ಅದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI). ಇಂತಹ ಪರಿಸ್ಥಿತಿಯಲ್ಲಿ ಮಂಡಳಿಯ ತೆರಿಗೆಯೂ ಹೆಚ್ಚು ಪಾವತಿಸುವ ನಿರೀಕ್ಷೆಯಿದೆ ಮತ್ತು ಇದು ಸತ್ಯವೂ ಆಗಿದೆ. 

ನವದೆಹಲಿ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದರೆ ಅದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI). ಇಂತಹ ಪರಿಸ್ಥಿತಿಯಲ್ಲಿ ಮಂಡಳಿಯ ತೆರಿಗೆಯೂ ಹೆಚ್ಚು ಪಾವತಿಸುವ ನಿರೀಕ್ಷೆಯಿದೆ ಮತ್ತು ಇದು ಸತ್ಯವೂ ಆಗಿದೆ. 

ಕಳೆದ ಐದು ವರ್ಷಗಳಲ್ಲಿ ಬಿಸಿಸಿಐ ಕೇವಲ 100 ಅಥವಾ 200 ಕೋಟಿ ರೂಪಾಯಿ ಪಾವತಿಸಿಲ್ಲ, ಅದು ಆದಾಯ ತೆರಿಗೆಯಾಗಿ ಬರೋಬ್ಬರಿ 4,298 ರೂಪಾಯಿ ಪಾವತಿಸಿದೆ. ಭಾರತೀಯ ಕ್ರಿಕೆಟ್ ಮಂಡಳಿಯು ತೆರಿಗೆ ಮುಕ್ತವಾಗಿರಬೇಕು. ಆದರೆ ಜನಪ್ರಿಯ ನಂಬಿಕೆಗೆ ವಿರುದ್ಧವಾಗಿ, ಬಿಸಿಸಿಐ ತನ್ನ ಆದಾಯ ತೆರಿಗೆ ಬಾಧ್ಯತೆಗಳನ್ನು ಸತತವಾಗಿ ಪೂರೈಸಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಜ್ಯಸಭೆಗೆ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಬಿಸಿಸಿಐ ಆದಾಯ ತೆರಿಗೆಯಲ್ಲಿ ಒಟ್ಟು 4,298.12 ಕೋಟಿ ರೂಪಾಯಿ ಪಾವತಿಸಿದೆ. ಭಾರತೀಯ ಕ್ರಿಕೆಟ್ ಮಂಡಳಿಯು 2020-21ರಲ್ಲಿ ರೂ. 844.92 ಕೋಟಿ, 2019-20 ರಲ್ಲಿ ರೂ. 882.29 ಕೋಟಿಗಳು, 2018-19 ರಲ್ಲಿ ರೂ. 815.08 ಕೋಟಿಗಳು, 2017-18 ರಲ್ಲಿ ರೂ. 596.63 ಕೋಟಿಗಳು ಮತ್ತು ಇತ್ತೀಚಿನ ಆರ್ಥಿಕ ವರ್ಷದಲ್ಲಿ ರೂ 1,159.20 ಕೋಟಿಗಳನ್ನು ಹೆಚ್ಚುವರಿಯಾಗಿ ಆದಾಯ ತೆರಿಗೆ ಪಾವತಿಸಿದೆ ಎಂದರು. ರಾಜ್ಯಸಭಾ ಸದಸ್ಯ ಅನಿಲ್ ದೇಸಾಯಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸಚಿವರು ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪಂಕಜ್ ಚೌಧರಿ, ಜಾಗತಿಕವಾಗಿ ಕ್ರೀಡಾ ಸಂಸ್ಥೆಗಳಿಗೆ ಸಂಬಂಧಿಸಿದ ದತ್ತಾಂಶವನ್ನು ಸರ್ಕಾರವು ನಿರ್ವಹಿಸುವುದಿಲ್ಲ. ಆದರೂ, ಬಿಸಿಸಿಐ ಕಳೆದ ಐದು ವರ್ಷಗಳಲ್ಲಿ ಸಲ್ಲಿಸಿದ ಆದಾಯ ತೆರಿಗೆ ರಿಟರ್ನ್ಸ್ ಪ್ರಕಾರ ಆದಾಯ ಮತ್ತು ವೆಚ್ಚದ ವಿವರಗಳನ್ನು ಪ್ರಸ್ತುತಪಡಿಸಿದರು. ಇದು ಬಿಸಿಸಿಐ 2021-22 ಹಣಕಾಸು ವರ್ಷದಲ್ಲಿಯೇ 4542 ಕೋಟಿ ರೂ.ಗಳ ಹೆಚ್ಚುವರಿ ಮೊತ್ತವನ್ನು ಹೊಂದಿದೆ ಎಂದು ಬಹಿರಂಗಪಡಿಸಿತು. 2020-21 ಮತ್ತು 2019-20ರಲ್ಲಿ ಇದು ಕ್ರಮವಾಗಿ 1,650 ಕೋಟಿ ಮತ್ತು 2,700 ಕೋಟಿ ರೂಪಾಯಿ ಆದಾಯ ಹೊಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT