ಏಷ್ಯಾಕಪ್ 2023ಗೆ ಟೀಂ ಇಂಡಿಯಾ ಪ್ರಕಟ 
ಕ್ರಿಕೆಟ್

ಏಷ್ಯಾ ಕಪ್ 2023ಗೆ ಟೀಂ ಇಂಡಿಯಾ ಪ್ರಕಟ: ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ ಮನ್ ಗಿಲ್ ಗೆ ಅವಕಾಶ!

ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಗೆ ಬಿಸಿಸಿಐ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಿದ್ದು, ಉದಯೋನ್ಮುಖ ಆಟಗಾರ ತಿಲಕ್ ವರ್ಮಾ, ಶುಭ್ ಮನ್ ಗಿಲ್ ಮತ್ತು ಹಿರಿಯ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವಕಾಶ ಪಡೆದಿದ್ದಾರೆ.

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಗೆ ಬಿಸಿಸಿಐ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಿದ್ದು, ಉದಯೋನ್ಮುಖ ಆಟಗಾರ ತಿಲಕ್ ವರ್ಮಾ, ಶುಭ್ ಮನ್ ಗಿಲ್ ಮತ್ತು ಹಿರಿಯ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವಕಾಶ ಪಡೆದಿದ್ದಾರೆ.

ಹೌದು.. ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್‌ ಕ್ರಿಕೆಟ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ತಂಡದ ಹಿರಿಯ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಇಬ್ಬರೂ ಬ್ಯಾಟರ್‌ಗಳು ದೀರ್ಘಕಾಲದ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದರು ಮತ್ತು ಸಾಕಷ್ಟು ಸಮಯದವರೆಗೆ ಕ್ರೀಡೆಯಿಂದ ಹೊರಗುಳಿದಿದ್ದರು. 

ಇದೀಗ ಈ ಇಬ್ಬರೂ ಆಟಗಾರರು ಚೇತರಿಸಿಕೊಂಡಿದ್ದು ಮಾತ್ರವಲ್ಲದೇ ತಂಡಕ್ಕೆ ಲಭ್ಯರಾಗಿರುವುದು ತಂಡಕ್ಕೆ ಉತ್ತೇಜನ ಸಿಕ್ಕಂತಾಗಿದೆ. ಎರಡು ತಿಂಗಳೊಳಗೆ ವಿಶ್ವಕಪ್ ಬರುವುದರಿಂದ ಭಾರತ ತಂಡಕ್ಕೆ ಭಾರಿ ಉತ್ತೇಜನ ಸಿಕ್ಕಿದೆ. ಇನ್ನು ಈ ಹಿಂದೆ ನಡೆದ ವೆಸ್ಟ್ ಇಂಡೀಸ್‌ ಪ್ರವಾಸದಲ್ಲಿ ತಮ್ಮ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯದಲ್ಲೇ ಪ್ರಭಾವಿ ಆಟ ಪ್ರದರ್ಶಿಸಿದ್ದ ತಿಲಕ್ ವರ್ಮಾ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ. ತಿಲಕ್ ವರ್ಮಾ ಮಾತ್ರವಲ್ಲದೇ ಉದಯೋನ್ಮುಖ ಆಟಗಾರ ಶುಭ್ ಮನ್ ಗಿಲ್ ಕೂಡ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳು ಪೃಥ್ವಿ ಶಾ ತಂಡದಿಂದ ದೂರ ಉಳಿದಿದ್ದು, ಅವರ ಚೇತರಿಕೆಗೆ ಮತ್ತಷ್ಟು ಸಮಯಾವಕಾಶ ಬೇಕಿದೆ ಎಂದು ಹೇಳಲಾಗಿದೆ.

ಉಳಿದಂತೆ ಐರ್ಲೆಂಡ್‌ನಲ್ಲಿ ಬಹುನಿರೀಕ್ಷಿತ ಕಮ್ ಬ್ಯಾಕ್ ಮಾಡಿರುವ ಹಿರಿಯ ಆಟಗಾರ ಮತ್ತು ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. 

ತಂಡ ಇಂತಿದೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ತಿಲಕ್ ವರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT