ಭಾರತ ತಂಡದ ಆಟಗಾರರ ಚಿತ್ರ 
ಕ್ರಿಕೆಟ್

4ನೇ ಟಿ20 ಪಂದ್ಯ: ಏಕದಿನ ವಿಶ್ವ ಚಾಂಪಿಯನ್ ಆಸೀಸ್ ಬಗ್ಗುಬಡಿದ ಭಾರತಕ್ಕೆ 20 ರನ್ ಜಯ, ಸರಣಿ ವಶ

ಏಕದಿನ ಕ್ರಿಕೆಟ್ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 4ನೇ ಟಿ-20 ಪಂದ್ಯದಲ್ಲಿ 20 ರನ್ ಗಳಿಂದ ಗೆಲುವು ಸಾಧಿಸಿದ ಭಾರತ  ಸರಣಿಯನ್ನು 3-1 ಅಂತರದಿಂದ ಗೆದ್ದು ಬೀಗಿದೆ.

ರಾಯಪುರ: ಏಕದಿನ ಕ್ರಿಕೆಟ್ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 4ನೇ ಟಿ-20 ಪಂದ್ಯದಲ್ಲಿ 20 ರನ್ ಗಳಿಂದ ಗೆಲುವು ಸಾಧಿಸಿದ ಭಾರತ  ಸರಣಿಯನ್ನು 3-1 ಅಂತರದಿಂದ ಗೆದ್ದು ಬೀಗಿದೆ.

ಹೌದು. ಇಲ್ಲಿನ ಇಲ್ಲಿನ ಶಹೀದ್ ವೀರ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು.

ಭಾರತ ಪರ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ 37, ಋತುರಾಜ್ ಗಾಯಕ್ವಾಡ್ 32 ರನ್ ಗಳಿಸುವ ಮೂಲಕ ಉತ್ತಮ ಆರಂಭ ನೀಡಿದರು. ನಂತರ ಬಂದ ಶ್ರೇಯಸ್ ಅಯ್ಯರ್ ಮತ್ತೆ ಕೇವಲ 8 ರನ್ ಗಳಿಸಿ ವೈಫಲ್ಯ ಕ್ಕೊಳಗಾದರು. ನಾಯಕ ಸೂರ್ಯ ಕುಮಾರ್ ಯಾದವ್ ಕೇವಲ 1 ರನ್ ಗಳಿಗೆ ಔಟಾಗಿ ಫೆವಿಲಿಯನ್ ಸೇರಿದರು.

ರಿಂಕ್ ಸಿಂಗ್ ಇಲ್ಲಿಯೂ ಭರ್ಜರಿ ಪ್ರದರ್ಶನ ನೀಡಿದರು. 29 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಿಡಿಸಿ 46 ರನ್ ಗಳಿಸಿದರು, ಜಿತೇಶ್ ಶರ್ಮಾ 35, ರವಿ ಬಿಷ್ಣೋಯಿ 4 ರನ್ ಗಳಿಸುವುದರೊಂದಿಗೆ ಭಾರತ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು.

ಭಾರತ ನೀಡಿದ 175 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಆಸ್ಟೇಲಿಯಾ ಪರ ಟ್ರಾವಿಸ್ ಹೇಡ್ 31,ಜೋಸ್ ಫಿಲ್ಲಿಪ್ 8, ಬೆನ್ ಮ್ಯಾಕ್ ಡರ್ಮೊಟ್ 19, ಟಿಮ್ ಡೇವಿಡ್ 19, ಮ್ಯಾಥ್ಯೂ ಶಾರ್ಟ್ 22, ಮ್ಯಾಥ್ಯೂ ವಾಡೆ 36 ರನ್ ಗಳಿಸಿದರು. ಉಳಿದ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಇದರಿಂದಾಗಿ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ಭಾರತ 20 ರನ್ ಗಳೊಂದಿಗೆ ಗೆಲುವು ಸಾಧಿಸಿತು. 3-1 ಅಂತರದಿಂದ ಸರಣಿ ವಶಪಡಿಸಿಕೊಂಡಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT