ಮೊಹಮ್ಮದ್ ಶಮಿ 
ಕ್ರಿಕೆಟ್

ನಾನು ಭಾರತೀಯ, ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ: ಪಾಕಿಸ್ತಾನ ಟ್ರೋಲಿಗರ ಮೈಚಳಿ ಬಿಡಿಸಿದ ಮೊಹಮ್ಮದ್ ಶಮಿ!

ಟೀಮ್ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಕಳೆದ ಎರಡು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರ ಮೊದಲ 4 ಪಂದ್ಯಗಳಿಂದ ಹೊರಗುಳಿದ ನಂತರ, ತಂಡಕ್ಕೆ ಮರಳಿದ ಶಮಿ ಅದ್ಭುತ ಪ್ರದರ್ಶನ ನೀಡಿ ತಂಡವನ್ನು ಫೈನಲ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

ನವದೆಹಲಿ: ಟೀಮ್ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಕಳೆದ ಎರಡು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರ ಮೊದಲ 4 ಪಂದ್ಯಗಳಿಂದ ಹೊರಗುಳಿದ ನಂತರ, ತಂಡಕ್ಕೆ ಮರಳಿದ ಶಮಿ ಅದ್ಭುತ ಪ್ರದರ್ಶನ ನೀಡಿ ತಂಡವನ್ನು ಫೈನಲ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

ಇತ್ತೀಚೆಗೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದ ವಿಶ್ವ ಕಪ್ 2023ರ  ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್​ ಪಡೆದ ಬಳಿಕ ಭಾರತದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಈ ಸಾಧನೆ ಮಾಡಿದ ಕೂಡಲೇ ‘ಸಜ್ದಾ’ (ಮುಸ್ಲಿಂ ನಮಸ್ಕಾರ) ಮಾಡಲು ಮುಂದಾಗಿ ಕೊನೆಗೆ ಟೀಕಾಕಾರರ ಬಾಯಿಗೆ ಆಹಾರವಾಗುತ್ತೇನೆ ಎಂಬ ಭಯದಿಂದ ಇದನ್ನು ನಿಲ್ಲಿಸಿದರೇ ಎಂಬ ವಿಷಯ ಭಾರಿ ಚರ್ಚೆಯಾಗಿತ್ತು. ಇದಕ್ಕೆ ಶಮಿ ಅವರು ಸುಮಾರು ಒಂದು ತಿಂಗಳ ಬಳಿಕ ಉತ್ತರ ನೀಡಿದ್ದಾರೆ.

ಆಜ್​ ತಕ್​ ಸಂದರ್ಶನದಲ್ಲಿ ಶಮಿ ಅವರಿಗೆ ಸಂದರ್ಶಕ ಈ ಕುರಿತು ಪ್ರಶ್ನೆಯೊಂದನ್ನು ಕೇಳಿ, ನೀವು ನಿಜವಾಗಿಯೂ ಸಜ್ದಾ (ಪ್ರಾರ್ಥನೆ) ಮಾಡಲು ಮುಂದಾಗಿ ಇದನ್ನು ಅರ್ಧಕ್ಕೆ ನಿಲ್ಲಿಸಿದರೇ? ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಶಮಿ, ನಾನು ಹೆಮ್ಮೆಯ ಭಾರತೀಯ. ಇಲ್ಲಿ ನನಗೆ ಯಾವುದೇ ಭಯವಿಲ್ಲ. ನಾನು ಸಜ್ದಾ ಮಾಡಲು ಬಯಸಿದ್ದರೆ ಅದನ್ನು ಯಾರು ಕೂಡ ತೆಡೆಯುತ್ತಿರಲಿಲ್ಲ. ನಾನು ಸಜ್ದಾ ಮಾಡಬೇಕಾದರೆ, ಅದನ್ನು ಮಾಡುತ್ತೇನೆ, ಏನು ಸಮಸ್ಯೆ?ಎಂದು ಉತ್ತರಿಸಿದರು.

ನನಗೆ ಏನಾದರೂ ಸಮಸ್ಯೆಯಿದ್ದರೆ, ನಾನು ಭಾರತದಲ್ಲಿ ವಾಸಿಸುತ್ತಿರಲಿಲ್ಲ. ಸಜ್ದಾ ಮಾಡಲು ನಾನು ಯಾರೊಬ್ಬರ ಅನುಮತಿಯನ್ನು ತೆಗೆದುಕೊಳ್ಳಬೇಕಾದರೆ, ನಾನು ಇಲ್ಲಿ ಏಕೆ ವಾಸಿಸಬೇಕು. ನನ್ನ ದೇಶ ಭಾರತ ನನಗೆ ಎಲ್ಲವನ್ನು ನೀಡಿದೆ. ಯಾವುತ್ತೂ ಕೂಡ ನಾನೊಬ್ಬ ಮುಸ್ಲಿಂ ಎಂದು ನನ್ನನ್ನು ಕಡೆಗಣಿಸಿಲ್ಲ. ಭೇದ ಭಾವ ಮಾಡಿಲ್ಲ. ಒಂದೊಮ್ಮೆ ಇದನ್ನು ಮಾಡುತ್ತಿದ್ದರೆ ನಾನು ಇಂದು ಭಾರತ ತಂಡದ ಭಾಗವಾಗುತ್ತಿರಲಿಲ್ಲ ಎಂದು ಹೇಳುವ ಮೂಲಕ ಶಮಿ ಅವರು ತಮ್ಮ ವಿಚಾರದಲ್ಲಿ ದೇಶದ ಹೆಸರಿಗೆ ಕಳಂಕ ತರುವ ಮತ್ತು ಕೋಮು ಸಂಘರ್ಷ ಸಾರುವ ಕಿಡಿಗೇಡಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.

ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ಕೇವಲ 7 ಪಂದ್ಯಗಳನ್ನು ಆಡಿ 24 ವಿಕೆಟ್‌ಗಳನ್ನು ಕಬಳಿಸಿ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ ಎನಿಸಿಕೊಂಡಿದ್ದರು. ಎರಡು ಬಾರಿ ಐದು ವಿಕೆಟ್‌ಗಳು ಮತ್ತು ಒಂದು ಬಾರಿ ಏಳು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದರು. ಶಮಿಯ ಘಾತಕ ಬೌಲಿಂಗ್​ ಮುಂದೆ ಎದುರಾಳಿ ತಂಡದ ಬ್ಯಾಟರ್​ಗಳು ರನ್​ ಗಳಿಸಲು ಪರದಾಟ ನಡೆಸಿದ್ದರು.​

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT