ಎಂಎಸ್ ಧೋನಿ ಜೆರ್ಸಿ 
ಕ್ರಿಕೆಟ್

ಎಂಎಸ್ ಧೋನಿ ಜೆರ್ಸಿ ಸಂಖ್ಯೆ ಇನ್ಮುಂದೆ ಯಾರಿಗೂ ಸಿಗಲ್ಲ: ಸಚಿನ್ ತೆಂಡುಲ್ಕರ್ ಸಾಲಿಗೆ ಸೇರಿದ ಕ್ಯಾಪ್ಟನ್ ಕೂಲ್!

ಭಾರತದ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಎಂಎಸ್ ಧೋನಿ ಅವರ ನಂಬರ್ 7ನೇ ಜೆರ್ಸಿ ಇನ್ಮುಂದೆ ಯಾವುದೇ ಆಟಗಾರನಿಗೆ ಲಭ್ಯವಿರುವುದಿಲ್ಲ. ಏಕೆಂದರೆ, ಬಿಸಿಸಿಐ ಈ ಐಕಾನಿಕ್ ಜೆರ್ಸಿ ಸಂಖ್ಯೆಯನ್ನು ನಿವೃತ್ತಿ ಮಾಡಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ನವದೆಹಲಿ: ಭಾರತದ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಎಂಎಸ್ ಧೋನಿ ಅವರ ನಂಬರ್ 7ನೇ ಜೆರ್ಸಿ ಇನ್ಮುಂದೆ ಯಾವುದೇ ಆಟಗಾರನಿಗೆ ಲಭ್ಯವಿರುವುದಿಲ್ಲ. ಏಕೆಂದರೆ, ಬಿಸಿಸಿಐ ಈ ಐಕಾನಿಕ್ ಜೆರ್ಸಿ ಸಂಖ್ಯೆಯನ್ನು ನಿವೃತ್ತಿ ಮಾಡಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

'ಭಾರತೀಯ ಕ್ರಿಕೆಟ್ ಮಂಡಳಿಯು, ಕ್ರೀಡೆಗೆ ಎಂಎಸ್ ಧೋನಿ ಅವರ ಕೊಡುಗೆಗೆ ಗೌರವ ಸಲ್ಲಿಸಲು, ಧೋನಿಯವರ ಜೆರ್ಸಿ ಸಂಖ್ಯೆಯನ್ನು 'ನಿವೃತ್ತಿ' ಮಾಡಲು ನಿರ್ಧರಿಸಿದೆ' ಎಂದು ಶುಕ್ರವಾರ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

'2020ರ ಆಗಸ್ಟ್ 15ರಂದು ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದರು. ಆದಾಗಿ ಮೂರು ವರ್ಷಗಳು ಕಳೆದಿವೆ. ಆದಾಗ್ಯೂ, ಅವರು ಐಪಿಎಲ್ ಕ್ರಿಕೆಟ್‌ನಲ್ಲಿ ಇನ್ನೂ ಸಕ್ರಿಯರಾಗಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂಬರುವ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ.

ಚೊಚ್ಚಲ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಪ್ರಶಸ್ತಿ ತಂದುಕೊಟ್ಟ ತಂಡದ ನಾಯಕತ್ವವನ್ನು ಧೋನಿ ವಹಿಸಿದ್ದರು.

2017ರಲ್ಲಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಧರಿಸಿದ್ದ 10ನೇ ನಂಬರ್ ಜೆರ್ಸಿಯನ್ನು ಕೂಡ ಬಿಸಿಸಿಐ ಅಧಿಕೃತವಾಗಿ ನಿವೃತ್ತಿಗೊಳಿಸಿತ್ತು.

ಧೋನಿ (7) ಮತ್ತು ತೆಂಡೂಲ್ಕರ್ (10) ಧರಿಸಿರುವ ಜೆರ್ಸಿ ಸಂಖ್ಯೆಗಳು ಇನ್ಮುಂದೆ ಚೊಚ್ಚಲ ಆಟಗಾರರು ಸೇರಿದಂತೆ ಯಾರಿಗೂ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ತನ್ನ ನಿರ್ಧಾರದ ಬಗ್ಗೆ ತಂಡಕ್ಕೆ ತಿಳಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT