ಭಾರತ ತಂಡದ ಆಟಗಾರ್ತಿಯರ ಫೋಟೋ ಕ್ಲಿಕ್ಕಿಸಿದ ಆಸಿಸ್ ನಾಯಕಿ 
ಕ್ರಿಕೆಟ್

ಭಾರತ ವನಿತೆಯರ ಐತಿಹಾಸಿಕ ಗೆಲುವಿನ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದ ಆಸಿಸ್ ನಾಯಕಿ

ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಏಕೈಕ ಪಂದ್ಯದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ವನಿತೆಯರ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ಈ ಸಾಧನೆಯ ಗೆಲುವಿನ ಸಂಭ್ರಮವನ್ನು ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸ್ಸಾ ಹೀಲಿ ಕ್ಯಾಮೆರಾದಲ್ಲಿ ಸೆರೆ ಹಿಡಿಯುವ ಮೂಲಕ ಸ್ಮರಣೀಯವಾಗಿಸಿದ್ದಾರೆ.

ಮುಂಬೈ: ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಏಕೈಕ ಪಂದ್ಯದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ವನಿತೆಯರ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ಈ ಸಾಧನೆಯ ಗೆಲುವಿನ ಸಂಭ್ರಮವನ್ನು ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸ್ಸಾ ಹೀಲಿ ಕ್ಯಾಮೆರಾದಲ್ಲಿ ಸೆರೆ ಹಿಡಿಯುವ ಮೂಲಕ ಸ್ಮರಣೀಯವಾಗಿಸಿದ್ದಾರೆ.

ಆಸ್ಟ್ರೇಲಿಯಾ(AUSW vs INDW) ವಿರುದ್ಧದ ಏಕೈಕ ಪಂದ್ಯದ ಟೆಸ್ಟ್ ಸರಣಿಯನ್ನು 8 ವಿಕೆಟ್​ಗಳಿಂದ ಗೆಲ್ಲುವ ಮೂಲಕ ಭಾರತ ಮಹಿಳಾ ಕ್ರಿಕೆಟ್​ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಈ ಗೆಲುವಿನ ಸಂಭ್ರಮದಲ್ಲಿದ್ದಾಗ ಆಸೀಸ್​ ನಾಯಕಿ ಅಲಿಸ್ಸಾ ಹೀಲಿ(Australia captain Alyssa Healy) ಅವರು ಅಚ್ಚರಿ ಎಂಬಂತೆ ಕ್ಯಾಮೆರಾ ಹಿಡಿದು ಮೈದಾನಕ್ಕೆ ಬಂದಿದ್ದು, ಟೀಂ ಇಂಡಿಯಾ ಆಟಗಾರ್ತಿಯರ ಫೋಟೊ ಕೂಡ ಕ್ಲಿಕ್ಕಿಸಿದ್ದಾರೆ.

ಸೋತರೂ ಕ್ರೀಡಾಸ್ಫೂರ್ತಿ ಮೆರೆದ ಅಲಿಸ್ಸಾ ಹೀಲಿ ಇದೀಗ ಎಲ್ಲರ ಹೃದಯ ಗೆದ್ದಿದ್ದಾರೆ. ಹೀಲಿ ಕ್ಯಾಮೆರಾ ಹಿಡಿದುಕೊಂಡು ಬಂದ ವಿಡಿಯೊ(viral cricket video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಅಂದಹಾಗೆ ಪಂದ್ಯದ ಅಂತಿಮ ದಿನ ಭಾರತ ಮಹಿಳಾ ತಂಡಕ್ಕೆ ಗೆಲ್ಲಲು ಕೇವಲ 75 ರನ್‌ಗಳು ಬೇಕಿತ್ತು. 18.4 ಓವರ್​ನಲ್ಲಿ 2 ವಿಕಟ್​ನಷ್ಟಕ್ಕೆ ಈ ಮೊತ್ತವನ್ನು ಬೆನ್ನಟ್ಟಿದ ಭಾರತ ಐತಿಹಾಸಿಕ ಗೆಲುವ ದಾಖಲಿಸಿತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ಬೌಂಡರಿ ಬಾರಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ