ಡೀನ್ ಎಲ್ಗಾರ್ ಬ್ಯಾಟಿಂಗ್ 
ಕ್ರಿಕೆಟ್

ಮೊದಲ ಟೆಸ್ಟ್; 2ನೇ ದಿನದಾಟದ ಅಂತ್ಯಕ್ಕೆ ದ.ಆಫ್ರಿಕಾ 256/5, ಭಾರತ ವಿರುದ್ದ 11 ರನ್ ಮುನ್ನಡೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿದ್ದು, ಭಾರತದ ವಿರುದ್ಧ 11 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

ಸೆಂಚೂರಿಯನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿದ್ದು, ಭಾರತದ ವಿರುದ್ಧ 11 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 2ನೇ ದಿನ ಭಾರತ ತಂಡ ಕೆಎಲ್ ರಾಹುಲ್ ಶತಕದ ನೆರವಿನಿಂದ 245ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆಡುತ್ತಿರುವ ದಕ್ಷಿಣ ಆಫ್ರಿಕಾ ತಂಡ ಡೀನ್ ಎಲ್ಗಾರ್ (ಅಜೇಯ 140ರನ್)ಅಮೋಘ ಶತಕ ಹಾಗೂ ಡೇವಿಡ್ ಬೆಡಿಂಗ್ಹ್ಯಾಮ್ (56 ರನ್) ಅರ್ಧಶತಕದ ನೆರವಿನಿಂದ 256 ರನ್ ಗಳಿಸಿದೆ. 

ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾಗೆ ಭಾರತದ ವೇಗಿ ಮಹಮದ್ ಸಿರಾಜ್ ಆರಂಭಿಕ ಆಘಾತ ನೀಡಿದ್ದರು. ಆಫ್ರಿಕಾದ ಆರಂಭಿಕ ಆಟಗಾರ ಐಡೆನ್ ಮಾರ್ಕ್ರಾಮ್ ಕೇವಲ 5ರನ್ ಗಳಿಗೆ ಕೆಎಲ್ ರಾಹುಲ್ ಗೆ ಕ್ಯಾಚಿತ್ತು ಔಟಾದರು. ಬಳಿಕ ಟೋನಿ ಡಿ ಜೋರ್ಜಿ ಕೂಡ 28 ರನ್ ಗಳಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಎಲ್ಗಾರ್ ಉತ್ತಮ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದ್ದರು.

ಈ ಹಂತದಲ್ಲಿ ಕೀಗನ್ ಪೀಟರ್ಸನ್ ಕೇವಲ 2ರನ್ ಗಳಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಕೈಲ್ ವೆರ್ರೆನ್ನೆ 4 ರನ್ ಗಳಿಸಿ ದಿನದಾಟದ ಅಂತಿಮ ಹಂತದಲ್ಲಿ ವಿಕೆಟ್ ಕೈ ಚೆಲ್ಲಿದರು. ಈ ಹೊತ್ತಿಗಾಗಲೇ ಎಲ್ಗಾರ್ ಶತಕ ಸಿಡಿಸಿದ್ದರು.

ಅಂತಿಮವಾಗಿ ದಿನದಾಟದ ಅಂತ್ಯಕ್ಕೆ ದ.ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿ ಭಾರತದ ವಿರುದ್ಧ 11 ರನ್ ಗಳ ಮುನ್ನಡೆ ಸಾಧಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT