ಕೆಎಲ್ ರಾಹುಲ್ 
ಕ್ರಿಕೆಟ್

KL Rahul Century: ಸಿಕ್ಸರ್ ಬಾರಿಸುವ ಮೂಲಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ ಕೆಎಲ್ ರಾಹುಲ್

ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸಂಕಷ್ಟದ ಸಮಯದಲ್ಲಿ ಅದ್ಭುತ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್ ಗಳಿಗೆ ಸರ್ಪಪತನ ಕಂಡಿದೆ.

ಸೆಂಚುರಿಯನ್: ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸಂಕಷ್ಟದ ಸಮಯದಲ್ಲಿ ಅದ್ಭುತ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್ ಗಳಿಗೆ ಸರ್ಪಪತನ ಕಂಡಿದೆ. 

ಇದಕ್ಕೂ ಮುನ್ನ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ತಂಡ 8 ವಿಕೆಟ್‌ಗೆ 208 ರನ್ ಗಳಿಸಿತ್ತು. ಕೆಎಲ್ ರಾಹುಲ್ 70 ರನ್ ಗಳಿಸಿ ಅಜೇಯರಾಗುಳಿದಿದ್ದರು. ಇನ್ನೊಂದು ತುದಿಯಲ್ಲಿ ಮೊಹಮ್ಮದ್ ಸಿರಾಜ್ ಖಾತೆ ತೆರೆಯಬೇಕಾಯಿತು. ಎರಡನೇ ದಿನದ ಆಟ ಆರಂಭವಾದಾಗ ಮೊಹಮ್ಮದ್ ಸಿರಾಜ್ ರೂಪದಲ್ಲಿ ಭಾರತಕ್ಕೆ ಮೊದಲ ಹೊಡೆತ ಬಿದ್ದಿತು. 22 ಎಸೆತಗಳಲ್ಲಿ 5 ರನ್ ಗಳಿಸಿ ಔಟಾದರೆ, ಇನ್ನೊಂದು ತುದಿಯಲ್ಲಿ ಕೆಎಲ್ ರಾಹುಲ್ ಶತಕದತ್ತ ಮುಂದುವರಿದರು. ಅವರು ತಮ್ಮ ಬ್ಯಾಟಿಂಗ್ ಮೂಲಕ ದಕ್ಷಿಣ ಆಫ್ರಿಕಾದ ಬೌಲರ್‌ಗಳನ್ನು ಬಹಳಷ್ಟು ತೊಂದರೆಗೊಳಿಸಿದರು.

ಚೊಚ್ಚಲ ಆಟಗಾರ ಪ್ರಸಿದ್ಧ್ ಕೃಷ್ಣ ಕೂಡ 8 ಎಸೆತಗಳನ್ನು ಎದುರಿಸಿ ವಿಕೆಟ್ ಕಳೆದುಕೊಳ್ಳಲಿಲ್ಲ. ಈ ವೇಳೆ ಕೆಎಲ್ ರಾಹುಲ್ 95 ರನ್ ಗಳಿಸಿ 66ನೇ ಓವರ್‌ನ ಕೊನೆಯ ಎಸೆತದಲ್ಲಿ ಜೆರಾಲ್ಡ್ ಕೋಟ್ಜೆಗೆ ಸಿಕ್ಸರ್ ಬಾರಿಸುವ ಮೂಲಕ ಶತಕ ಪೂರೈಸಿದರು. ಈ ಮೂಲಕ ಕೆಎಲ್ ರಾಹುಲ್ ಒಂದಕ್ಕಿಂತ ಹೆಚ್ಚು ಶತಕ ಸಿಡಿಸಿದ ಮೊದಲ ವಿದೇಶಿ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಹಿಂದೆ 2021-22ರಲ್ಲಿ ಕೆಎಲ್ ರಾಹುಲ್ 260 ಎಸೆತಗಳಲ್ಲಿ 123 ರನ್ ಗಳಿಸಿ ಶತಕ ಸಿಡಿಸಿದ್ದರು. ಇದು ದಕ್ಷಿಣ ಆಫ್ರಿಕಾ ವಿರುದ್ಧ ತನ್ನದೇ ನೆಲದಲ್ಲಿ ಅವರ ಎರಡನೇ ಟೆಸ್ಟ್ ಶತಕವಾಗಿದೆ.

ಭಾರತೀಯ ವಿಕೆಟ್‌ಕೀಪರ್‌ನ ಟೆಸ್ಟ್ ಶತಕ (ಏಷ್ಯಾದ ಹೊರಗೆ)
ರಿಷಬ್ ಪಂತ್: 4 ಶತಕ
ವಿಜಯ್ ಮಂಜ್ರೇಕರ್: ಒಂದು ಶತಕ
ಅಜಯ್ ರಾತ್ರಾ: ಒಂದು ಶತಕ
ವೃದ್ಧಿಮಾನ್ ಸಹಾ: ಒಂದು ಶತಕ
ಕೆಎಲ್ ರಾಹುಲ್: ಶತಕ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT