ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

ICC T20 Ranking: ಅಗ್ರಸ್ಥಾನದಲ್ಲಿ ಸೂರ್ಯ ಕುಮಾರ್ ಯಾದವ್ ಮುಂದುವರಿಕೆ, ರೇಟಿಂಗ್ ಹೆಚ್ಚಿಸಿಕೊಂಡ ಗಿಲ್

ಬುಧವಾರ ಬಿಡುಗಡೆಯಾದ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭಾರತದ ಬ್ಯಾಟಿಂಗ್‌ ಆಟಗಾರ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ದುಬೈ: ಬುಧವಾರ ಬಿಡುಗಡೆಯಾದ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭಾರತದ ಬ್ಯಾಟಿಂಗ್‌ ಆಟಗಾರ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ರಾಂಚಿಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ vs ಭಾರತ ಟಿ20ಸರಣಿಯ ಮೊದಲ ಪಂದ್ಯದಲ್ಲಿ 47 ರನ್ ಗಳಿಸಿದ ನಂತರ ಸೂರ್ಯಕುಮಾರ್ ತಮ್ಮ ಅಂಕಗಳಿಕೆಯನ್ನು 908ಕ್ಕೆ ಏರಿಸಿಕೊಂಡು ತಮ್ಮ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇತರ ಯಾವುದೇ ಭಾರತೀಯ ಬ್ಯಾಟರ್ ಅಥವಾ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರ 10 ರಲ್ಲಿ ಕಾಣಿಸಿಕೊಂಡಿಲ್ಲ ಮತ್ತು ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್‌ಗಳಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಔಟಾಗದೆ 26 ರನ್ ಗಳಿಸಿ 32 ವರ್ಷ ವಯಸ್ಸಿನ ಆಟಗಾರ ತಮ್ಮ ಈ ಹಿಂದಿದ್ದ ಒಟ್ಟು 910 ರೇಟಿಂಗ್ ನಿಂದ ಎರಡು ಅಂಕ ಕಳೆದುಕೊಂಡರು. ಅಂತೆಯೇ  ಪುರುಷರ T20I ಬ್ಯಾಟರ್‌ ಗಳ ವಿಭಾಗದಲ್ಲಿ ಸಾರ್ವಕಾಲಿಕ ಅತ್ಯಧಿಕ ರೇಟಿಂಗ್ ಅನ್ನು ಹೊಂದುವ ಸ್ಪರ್ಧೆಯಲ್ಲಿ ಸೂರ್ಯಕುಮಾರ್ ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಅವರ ಗಮನಾರ್ಹ ಅಂತರದಲ್ಲಿ ಉಳಿದಿದ್ದಾರೆ. 

ಈ ಹಿಂದೆ ಮಲನ್ ಅವರು 2020 ರಲ್ಲಿ ಕೇಪ್ ಟೌನ್‌ನಲ್ಲಿ 915 ಪಾಯಿಂಟ್‌ಗಳ ರೇಟಿಂಗ್ ಅನ್ನು ಸಾಧಿಸಿದ್ದರು. ಇದೀಗ ಸೂರ್ಯ ಕುಮಾರ್ ಯಾದವ್ 908 ಅಂಕದಲ್ಲಿದ್ದು, ಇಂದು ನಡೆಯುವ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದರೆ ಈ ಸಾಧನೆಯನ್ನೂ ಹಿಂದಿಕ್ಕುವ ಸಾಧ್ಯತೆ ಇದೆ. 

ಕಳೆದ ವರ್ಷದ T20 ವಿಶ್ವಕಪ್‌ನಲ್ಲಿ ಆರು ಪಂದ್ಯಗಳಿಂದ ಒಟ್ಟು 239 ರನ್ ಗಳಿಸುವ ಮೂಲಕ ಸೂರ್ಯ ಕುಮಾರ್ ಯಾದವ್ ಅಗ್ರ ಶ್ರೇಯಾಂಕ ಪಡೆದರು. ಅಂತೆಯೇ ಕಳೆದ ತಿಂಗಳಷ್ಟೇ ಅವರು ICC T20 ವರ್ಷದ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿದ್ದರು. 

ಉಳಿದಂತೆ ಭಾರತದ ಮೊಹಮ್ಮದ್ ಸಿರಾಜ್ ಏಕದಿನ ರ್ಯಾಂಕಿಂಗ್‌ನಲ್ಲಿ ಅಗ್ರ ಶ್ರೇಯಾಂಕದ ಬೌಲರ್ ಆಗಿ ಮುಂದುವರಿದಿದ್ದಾರೆ. ಶುಭಮನ್ ಗಿಲ್ (ಆರನೇ), ವಿರಾಟ್ ಕೊಹ್ಲಿ (ಏಳನೇ) ಮತ್ತು ರೋಹಿತ್ ಶರ್ಮಾ (ಒಂಬತ್ತನೇ) ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಿರವಾಗಿ ಉಳಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT