ಭಾರತದ ಅಂಡರ್ -19 ಮಹಿಳಾ ಆಟಗಾರ್ತಿಯರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ 
ಕ್ರಿಕೆಟ್

ತವರಿಗೆ ಮರಳಿದ ವಿಶ್ವಕಪ್ ವಿಜೇತ ಭಾರತದ ಅಂಡರ್-19 ಮಹಿಳಾ ತಂಡ, ಅದ್ದೂರಿ ಸ್ವಾಗತ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದ 2023ರ ಐಸಿಸಿ ಅಂಡರ್ 19 ಮಹಿಳಾ ಟಿ-20 ವಿಶ್ವಕಪ್ ವಿಜೇತ ಭಾರತೀಯ ಆಟಗಾರ್ತಿಯರನ್ನು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.

ನವದೆಹಲಿ: ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದ 2023ರ ಐಸಿಸಿ ಅಂಡರ್ 19 ಮಹಿಳಾ ಟಿ-20 ವಿಶ್ವಕಪ್ ವಿಜೇತ ಭಾರತೀಯ ಆಟಗಾರ್ತಿಯರನ್ನು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.

ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಶಫಾಲಿ ವರ್ಮಾ ನೇತೃತ್ವದ ತಂಡವನ್ನು ಬಿಸಿಸಿಐ ಬುಧವಾರ ಸನ್ಮಾನಿಸಿತ್ತು. ಇದಾದ ಒಂದು ದಿನದ ಬಳಿಕ ಇಂದು ತಂಡ ತವರಿಗೆ ಮರಳಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಆಟಗಾರ್ತಿ ಪಾರ್ಶವಿ ಚೋಪ್ರಾ, ತುಂಬಾ ಒಳ್ಳೆಯ ಅನುಭವವಾಗಿದೆ. ಭಾರತದ ಮಹಿಳಾ ತಂಡ ಮೊದಲ ಬಾರಿಗೆ U-19 ವಿಶ್ವಕಪ್ ಚಾಂಪಿಯನ್ ಆಗಿದೆ. ಇದು ಅದ್ಭುತವಾಗಿದೆ. ನನಗೆ ಸಿಗುವ ಯಾವುದೇ ಅವಕಾಶಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಅಲ್ಲದೇ, ತಮ್ಮ ದೇಶದ ಧ್ವಜವನ್ನು ಮೇಲ್ಭಾಗದಲ್ಲಿ ನೋಡುವುದಕ್ಕಿಂತ ದೊಡ್ಡ ಪ್ರೇರಣೆ ಇನ್ನೊಂದಿಲ್ಲ ಎಂದು ಅವರು ತಿಳಿಸಿದರು. 

ಗೆಲುವಿನ ಬಗ್ಗೆ ಮಾತನಾಡಿದ ಅರ್ಚನಾ ದೇವಿ, ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾಗುವುದು ನನ್ನ ಜೀವನದ ಅತ್ಯಂತ ದೊಡ್ಡ ದಿನವಾಗಿತ್ತು. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಅವರ ಕನಸನ್ನು ಬೆನ್ನಟ್ಟಲು ಪ್ರೇರೇಪಿಸಬೇಕು ಎಂದು ತಿಳಿಸಿದರು. 

ಭಾರತ ತಂಡದ ಉಪನಾಯಕಿ ಶ್ವೇತಾ ಶೆರಾವತ್ ಅವರನ್ನು ವಿಮಾನ ನಿಲ್ದಾಣದಿಂದ ದಕ್ಷಿಣ ದೆಹಲಿಯ ತಮ್ಮ ಮನೆಯವರೆಗೂ ರೋಡ್ ಶೋ ನಡೆಸಿದ್ದಾರೆ. ಅವರು 19 ವರ್ಷದೊಳಗಿನವರ ಮಹಿಳಾ ಟಿ-20 ವಿಶ್ವಕಪ್‌ನಲ್ಲಿ ಏಳು ಪಂದ್ಯಗಳಲ್ಲಿ 99.00 ಸರಾಸರಿಯಲ್ಲಿ 297 ರನ್‌ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT