ಭಾರತ ತಂಡ 
ಕ್ರಿಕೆಟ್

ಬಾರ್ಡರ್-ಗವಾಸ್ಕರ್ ಟ್ರೋಫಿ; ಮೊದಲ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 132 ರನ್ ಗೆಲುವು

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಇನಿಂಗ್ಸ್ ಮತ್ತು 132 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 4 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ 2023ರ ಮೊದಲ ಟೆಸ್ಟ್ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಿತು. ಇದರಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಇನಿಂಗ್ಸ್ ಮತ್ತು 132 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 4 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಸಂಪೂರ್ಣ ಸೋತಿದೆ. ಬೌಲಿಂಗ್‌ನಲ್ಲಾಗಲೀ ಅಥವಾ ಬ್ಯಾಟಿಂಗ್‌ನಲ್ಲಾಗಲೀ ಆಸ್ಟ್ರೇಲಿಯಾ ತನ್ನ ಶಕ್ತಿಯನ್ನು ತೋರಿಸಲು ಸಾಧ್ಯವಾಗಲಿಲ್ಲ. ಪಂದ್ಯ ಸಂಪೂರ್ಣವಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡದ ಕೈಯಲ್ಲಿತ್ತು. ಅದೇ ಸಮಯದಲ್ಲಿ, ಈ ದೊಡ್ಡ ಗೆಲುವಿನ ನಂತರ, ಅಭಿಮಾನಿಗಳು ಟೀಮ್ ಇಂಡಿಯಾವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೊಗಳುತ್ತಿದ್ದರೆ ಆಸ್ಟ್ರೇಲಿಯಾವನ್ನು ತೆಗೆಳುತ್ತಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಇನ್ನು ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರ ಬೌಲಿಂಗ್‌ನಿಂದಾಗಿ ಕಾಂಗರೂ ತಂಡ 177 ರನ್‌ಗಳಿಗೆ ಕುಸಿಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಜಡೇಜಾ 5 ವಿಕೆಟ್ ಪಡೆದರೆ, ಅಶ್ವಿನ್ 3 ವಿಕೆಟ್ ಪಡೆದರು. ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ 1-1 ವಿಕೆಟ್ ಪಡೆದರು.

ಇದಕ್ಕೆ ಉತ್ತರವಾಗಿ ರೋಹಿತ್ ಶರ್ಮಾ ಅವರ ಶತಕ (120), ಜಡೇಜಾ ಮತ್ತು ಅಕ್ಷರ್ ಅವರ ಅರ್ಧಶತಕಗಳ ನೆರವಿನಿಂದ 400 ರನ್ ಗಳಿಸಿ, 223 ರನ್ ಮುನ್ನಡೆ ಸಾಧಿಸಿತು. ಹೀಗಿರುವಾಗ ಪಂದ್ಯದ ಮೂರನೇ ದಿನ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ಸ್ಪಿನ್‌ನ ಮುಂದೆ ಮುಗ್ಗರಿಸಿತು. ಅಶ್ವಿನ್ 5 ವಿಕೆಟ್ ಪಡೆದು ತಲ್ಲಣ ಮೂಡಿಸಿದರು. ಆಸ್ಟ್ರೇಲಿಯ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 91 ರನ್ ಗಳಿಸಿ ಆಲೌಟ್ ಆಗಿತ್ತು. ಇದರಿಂದಾಗಿ ಭಾರತ ಇನ್ನಿಂಗ್ಸ್ ಮತ್ತು 132 ರನ್‌ಗಳ ಜಯ ಸಾಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT