ಪೃಥ್ವಿ ಶಾ 
ಕ್ರಿಕೆಟ್

ಸೆಲ್ಫಿಗೆ ನಿರಾಕರಣೆ, ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ

ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಆರೋಪಿಗಳು ಕಾರನ್ನು ಹಿಂಬಾಲಿಸಿ ಹಣ ನೀಡದಿದ್ದರೆ ಸುಳ್ಳು ಪ್ರಕರಣದ ಬೆದರಿಕೆ ಹಾಕಿರುವುದಾಗಿ ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಪೃಥ್ವಿ ಶಾ ವಾಯುವ್ಯ ಮುಂಬೈನ ಸಾಂತಾ ಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದಾಗ ಅಪರಿಚಿತರು ಸೆಲ್ಫಿಗೆ ಒತ್ತಾಯಿಸಿದ್ದಾರೆ.

ಇಬ್ಬರು ವ್ಯಕ್ತಿಗಳು ಸೆಲ್ಫಿಗೆ ಪೃಥ್ವಿ ಶಾ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಇದೇ ಗುಂಪು ಮತ್ತೆ ಬಂದಿದ್ದು, ಇತರ ಆರೋಪಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಕೇಳಿದ್ದಾರೆ. ಈ ವೇಳೆ ಶಾ ನಿರಾಕರಿಸಿದಾಗ, ಶಾ ಅವರ ಸ್ನೇಹಿತ ರೆಸ್ಟೋರೆಂಟ್ ಮ್ಯಾನೇಜರ್ ಗೆ ಕರೆ ಮಾಡಿ, ದೂರು ನೀಡಿದ್ದಾರೆ. ಆರೋಪಿಗಳನ್ನು ಹೊಟೇಲ್‌ನಿಂದ ಹೊರಹೋಗುವಂತೆ ವ್ಯವಸ್ಥಾಪಕರು ಹೇಳಿದ್ದಾರೆ.

ಈ ಘಟನೆಯಿಂದ ಕೆರಳಿದ ವ್ಯಕ್ತಿಗಳು ಹೋಟೆಲ್ ಹೊರಗಡೆ ಬೇಸ್ ಬಾಲ್ ಬ್ಯಾಟ್ ಗಳಿಂದ ಶಾ ಅವರ ಸ್ನೇಹಿತನ ಕಾರನ್ನು ಧ್ವಂಸಗೊಳಿಸಿದ್ದು, ಹಿಂಭಾಗದ ಗಾಜುಗಳನ್ನು ಒಡೆದು ಹಾಕಿದ್ದಾರೆ. ಘಟನೆ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 143, 148, 149, 427, 504 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT