ಚೇತನ್ ಶರ್ಮಾ 
ಕ್ರಿಕೆಟ್

ಕ್ರಿಕೆಟ್ ಆಟಗಾರರ ಮರ್ಯಾದೆ ಹರಾಜು: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ನ್ಯೂಸ್ ಚಾನೆಲ್‌ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ನ್ಯೂಸ್ ಚಾನೆಲ್‌ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಅವರು ಸ್ಟಿಂಗ್ ಆಪರೇಷನ್ ನಲ್ಲಿ ನೀಡಿದ ಹೇಳಿಕೆಯಿಂದ ಉಂಟಾಗಿರುವ ವಿವಾದದ ನಡುವೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದಾರೆ, ಅವರು ಅದನ್ನು ಅಂಗೀಕರಿಸಿದ್ದಾರೆ. ಅವರಿಂದ ನಾವು ರಾಜಿನಾಮೆ ಕೇಳಿರಲಿಲ್ಲ, ಸ್ವತಃ ಅವರೇ ರಾಜಿನಾಮೆ ನೀಡಿದ್ದಾರ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಗಾಳ ಮತ್ತು ಸೌರಾಷ್ಟ್ರ ನಡುವಿನ ರಣಜಿ ಟ್ರೋಫಿ ಫೈನಲ್‌ಗಾಗಿ ಚೇತನ್ ಶರ್ಮಾ ಇತರ ಆಯ್ಕೆ ಸಮಿತಿ ಸದಸ್ಯರೊಂದಿಗೆ ಕೋಲ್ಕತ್ತಾದಲ್ಲಿದ್ದರು.  2022ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ನಂತರ, ಬಿಸಿಸಿಐ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಆಗಲೂ ಚೇತನ್ ಶರ್ಮಾ ಮುಖ್ಯ ಆಯ್ಕೆಗಾರರಾಗಿದ್ದರು. ಇದಾದ ಬಳಿಕ ಅವರಿಗೆ ಮತ್ತೆ ಈ ಜವಾಬ್ದಾರಿ ಸಿಕ್ಕಿತ್ತು. ಆದರೆ ಇದಾದ ಬಳಿಕ ವಿವಾದದಿಂದಾಗಿ ಕುರ್ಚಿ ಕಳೆದುಕೊಳ್ಳಬೇಕಾಯಿತು.

ಕುಟುಕು ಕಾರ್ಯಾಚರಣೆಯಲ್ಲಿ ಶರ್ಮಾ ಅವರು ವಿರಾಟ್ ಕೊಹ್ಲಿ, ಸೌರವ್ ಗಂಗುಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ  ತಂಡದ ಇತರ ಹಲವಾರು ಆಟಗಾರರ ಬಗ್ಗೆ ಕೆಲವು ವಿಚಿತ್ರವಾದ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT