ರವೀಂದ್ರ ಜಡೇಜಾ 
ಕ್ರಿಕೆಟ್

ಇಮ್ರಾನ್ ಖಾನ್, ಕಪಿಲ್ ದೇವ್ ದಾಖಲೆ ಪುಡಿಗಟ್ಟಿ ರವೀಂದ್ರ ಜಡೇಜಾ ವಿಶ್ವ ದಾಖಲೆ!

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಉಸ್ಮಾನ್ ಖವಾಜಾರನ್ನು ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಔಟ್ ಮಾಡುವ ಮೂಲಕ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ.

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಉಸ್ಮಾನ್ ಖವಾಜಾರನ್ನು ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಔಟ್ ಮಾಡುವ ಮೂಲಕ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ.

ಖವಾಜಾ ವಿಕೆಟ್‌ನೊಂದಿಗೆ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್‌ ಮತ್ತು 2500 ರನ್ ಗಳನ್ನು ಬಾರಿಸಿದ ಎರಡನೇ ಅತಿ ವೇಗದ ಆಟಗಾರ ಎನಿಸಿಕೊಂಡಿದ್ದಾರೆ. ಕೇವಲ 62 ಪಂದ್ಯಗಳಲ್ಲಿ ಅವರು ಈ ಸಾಧನೆ ಮಾಡಿದ್ದು ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್ ದಾಖಲೆಯನ್ನು ಮುರಿದಿದ್ದಾರೆ. ಇಮ್ರಾನ್ 64 ಟೆಸ್ಟ್ ಪಂದ್ಯಗಳಲ್ಲಿ 250 ವಿಕೆಟ್ ಪಡೆದಿದ್ದರು. ಇನ್ನು ಇಯಾನ್ ಬೋಥಮ್ 55 ಪಂದ್ಯಗಳೊಂದಿಗೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 2500 ಅಥವಾ ಅದಕ್ಕಿಂತ ಹೆಚ್ಚು ರನ್ ಮತ್ತು 250 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್ 88 ಪಂದ್ಯಗಳಲ್ಲಿ 362 ವಿಕೆಟ್ ಹಾಗೂ ಕಪಿಲ್ ದೇವ್ 131 ಪಂದ್ಯಗಳಲ್ಲಿ 434 ವಿಕೆಟ್ ಗಳನ್ನು ಪಡೆದಿದ್ದಾರೆ.

ಗಮನಾರ್ಹವೆಂದರೆ ರವೀಂದ್ರ ಜಡೇಜಾ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಗೆಲ್ಲುವಲ್ಲಿ ಜಡೇಜಾ ಪ್ರಮುಖ ಪಾತ್ರ ವಹಿಸಿದ್ದರು. ಜಡೇಜಾ ಏಳು ವಿಕೆಟ್‌ಗಳನ್ನು ಕಬಳಿಸಿದರು. ಅಲ್ಲದೆ ಬ್ಯಾಟಿಂಗ್‌ನೊಂದಿಗೆ 70 ರನ್‌ಗಳ ಇನ್ನಿಂಗ್ಸ್‌ಗಳನ್ನು ಸಹ ಬಾರಿಸಿದ್ದರು. ಆಲ್ ರೌಂಡ್ ಪ್ರದರ್ಶನಕ್ಕಾಗಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT